ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 07:32 pm
Mangalore Correspondent
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am