ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm