ಎಸಿಬಿ ಮುಖ್ಯಸ್ಥರ ವಿರುದ್ಧ ಸಮರ ಸಾರಿದ ಹೈಕೋರ್ಟ್ ನ್ಯಾಯಾಧೀಶರಿಗೆ ಝೆಡ್ ಪ್ಲಸ್ ಭದ್ರತೆ ನೀಡಲು ಆಗ್ರಹ 

15-07-22 10:49 pm       Bangalore Correspondent   ಕರ್ನಾಟಕ

ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಸಮರ ಸಾರಿರುವ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿಗೆ ಗರಿಷ್ಠ ಪೊಲೀಸ್ ಭದ್ರತೆ ನೀಡುವಂತೆ ವಕೀಲರೊಬ್ಬರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು,ಜು.15 : ಭ್ರಷ್ಟಾಚಾರ ನಿಗ್ರಹ ದಳದ ವಿರುದ್ಧ ಸಮರ ಸಾರಿರುವ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿಗೆ ಗರಿಷ್ಠ ಪೊಲೀಸ್ ಭದ್ರತೆ ನೀಡುವಂತೆ ವಕೀಲರೊಬ್ಬರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಅಲ್ಲದೆ, ನ್ಯಾ.ಸಂದೇಶ್ ಅವರಿಗೆ ವರ್ಗಾವಣೆ ಬೆದರಿಕೆ ಹಾಕಿರುವ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿಯಲ್ಲಿ ಎಸಿಬಿ ವಿರುದ್ಧ ವಾಗ್ದಾಳಿ ನಡೆಸಿರುವ ನ್ಯಾ. ಸಂದೇಶ್ ಅವರಿಗೆ ಝಡ್ ಪ್ಲಸ್ ಅಥವಾ ವೈ ಪ್ಲಸ್ ಸೆಕ್ಯೂರಿಟಿಯನ್ನು ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು. ಜೊತೆಗೆ ಅವರು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅದರ ಮುಖ್ಯಸ್ಥರ ವಿರುದ್ಧ ಟೀಕೆ ಮಾಡುವ ಮೂಲಕ ಅಲ್ಲಿನ ಹುಳುಕುಗಳನ್ನು ಸಮಾಜಕ್ಕೆ ಎತ್ತಿ ತೋರಿಸಿದ್ದಾರೆ. ಆದರೆ ಅವರಿಗೆ ವರ್ಗಾವಣೆ ಮಾಡಿಸುವ ಬೆದರಿಕೆ ಹಾಕಿರುವುದರಿಂದ ನ್ಯಾಯಾಂಗಕ್ಕೆ ಬೆದರಿಕೆಯೊಡ್ಡಿದಂತೆ. ಹಾಗಾಗಿ ಅವರಿಗೆ ಬೆದರಿಕೆ ಹಾಕಿರುವ ಬಗ್ಗೆ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

A Karnataka based Advocate has moved the High Court seeking a direction to the state government to provide adequate security (Y, Y+, Z, Z+, whatever is suitable) to Justice H.P. Sandesh, who recently made sensational revelations regarding "transfer threats" for slamming investigations carried out by the Anti-Corruption Bureau in a case allegedly involving Deputy Commissioner, Bengaluru (Urban).