ಬ್ರೇಕಿಂಗ್ ನ್ಯೂಸ್
19-07-22 10:00 pm HK News Desk ಕರ್ನಾಟಕ
ಹಾಸನ, ಜುಲೈ 19: ಆನೆಯನ್ನು ಕೊಂದು ಹೂತು ಹಾಕಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಗಳ ರಕ್ಷಣೆಗೆ ಯತ್ನಿಸುತ್ತಿದ್ದಾರೆ. ಈ ಬಗ್ಗೆ ಆರೋಪಿತ ಅರಣ್ಯಾಧಿಕಾರಿಗಳನ್ನು ಗುರಿಯಾಗಿಸಿ ವಿಜಿಲೆನ್ಸ್ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಸಂಸದೆ ಮನೇಕಾ ಗಾಂಧಿ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ವಿದ್ಯುತ್ ಹರಿಸಿ ಆನೆಯನ್ನು ಕೊಂದು ಹಾಕಿದ್ದಲ್ಲದೆ, ಅದರ ದಂತವನ್ನು ತೆಗೆದು ಮಾರಾಟಕ್ಕೆ ಯತ್ನಿಸಲಾಗಿತ್ತು. ಮಾರ್ಚ್ 19ರಂದು ಬೆಂಗಳೂರಿನ ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರಿಗೆ ದಂತ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಆಮೂಲಕ ಆನೆಯನ್ನು ಕೊಂದಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.

ಆದರೆ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು ಒಟ್ಟು ಕೃತ್ಯವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಸ್ಥಳೀಯ ಅರಣ್ಯಾಧಿಕಾರಿಗಳು ಕೃತ್ಯದಲ್ಲಿ ಶಾಮೀಲಾಗಿದ್ದು, ಆರೋಪಿಗಳ ರಕ್ಷಣೆಗೆ ಹಾಸನ ಅರಣ್ಯ ಇಲಾಖೆಯ ಆರ್ ಎಫ್ ಓ ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರಿಗೆ ಪ್ರಕರಣ ಹಸ್ತಾಂತರಿಸಲು ಒತ್ತಡ ಹೇರುತ್ತಿದ್ದಾರೆ.


ಆರೋಪಿಗಳು ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರಾಗಿದ್ದು, ಸಂಸದರು ಅವರ ರಕ್ಷಣೆಗೆ ನಿಂತಿದ್ದಾರೆ. ಪ್ರಕರಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮುತುವರ್ಜಿ ವಹಿಸಬೇಕು. ಪ್ರಕರಣವನ್ನು ಹಾಸನ ಅರಣ್ಯ ಇಲಾಖೆಯಿಂದ ಪಡೆದು ವಿಜಿಲೆನ್ಸ್ ತನಿಖೆಗೆ ಒಪ್ಪಿಸಬೇಕು ಎಂದು ಮನೇಕಾ ಗಾಂಧಿ ಜುಲೈ 18ರಂದು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
Animal rights activist Maneka Gandhi, MP, has written to Chief Minister Basavaraj Bommai seeking a probe into the electrocution of a tusker, which came to light early this year in Hassan.Ms. Gandhi has alleged that a Range Forest Officer (RFO) in Hassan was trying to protect the accused in the case, buckling under pressure from Prajwal Revanna, MP.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm