ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm