ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm