ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm