ಬ್ರೇಕಿಂಗ್ ನ್ಯೂಸ್
24-07-22 01:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24 : ಗಾಂಜಾ ಗ್ಯಾಂಗ್ ಬೆನ್ನತ್ತಿ ಆಂಧ್ರ ಪ್ರದೇಶಕ್ಕೆ ತೆರಳಿದ್ದ ಶಿವಾಜಿನಗರ ಠಾಣೆ ಪೊಲೀಸರ ಕಾರು ಚಿತ್ತೂರಿನ ಬಳಿ ಅಪಘಾತಕ್ಕೀಡಾಗಿದ್ದು ಪಿಎಸ್ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಪೊಲೀಸ್ ಸಿಬ್ಬಂದಿಯ ಇನ್ನೋವಾ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿ ಸುಮಾರು 30 ಅಡಿ ತಗ್ಗಿನಲ್ಲಿದ್ದ ಮತ್ತೊಂದು ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ. ಇದರಿಂದ ತೀವ್ರ ಗಾಯಗೊಂಡ ಮೂವರು ಪೊಲೀಸ್ ಸಿಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಶಿವಾಜಿನಗರ ಠಾಣೆಯ ಪಿಎಸ್ಐ ಅವಿನಾಶ್, ಪ್ರೊಬೇಷನರಿ ಪಿಎಸ್ಐ ದೀಕ್ಷಿತ್, ಪೊಲೀಸ್ ಕಾನ್ಸ್ಟೇಬಲ್ ಅನಿಲ್ ಸೇರಿ ಆರು ಸಿಬಂದಿಯ ತಂಡವು ಖಾಸಗಿ ಏಜನ್ಸಿಯಿಂದ ಇನ್ನೋವಾ ಕಾರನ್ನು ಬಾಡಿಗೆ ಪಡೆದು ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರಕ್ಕೆ ತೆರಳಿದ್ದರು. ನಸುಕಿನ ಜಾವ 3 ಗಂಟೆ ಸುಮಾರಿಗೆ ತಂಡವೊಂದನ್ನು ಬೆನ್ನಟ್ಟುವ ಧಾವಂತದಲ್ಲಿ ಪೊಲೀಸರ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದೆ ಎನ್ನಲಾಗುತ್ತಿದೆ.

ಸಬ್ ಇನ್ಸ್ಪೆಕ್ಟರ್ ಅವಿನಾಶ್, ಕಾನ್ಸ್ಟೇಬಲ್ ಅನಿಲ್ ಹಾಗೂ ಖಾಸಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಪ್ರೊಬೆಷನರಿ ಪಿಎಸ್ಐ ದೀಕ್ಷಿತ್, ಕಾನ್ಸ್ಟೇಬಲ್ ಶರಣಬಸವ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಹೊರಟಿದ್ದ ಪೊಲೀಸರ ತಂಡ ಚಿತ್ತೂರಿನಲ್ಲಿ ಆರೋಪಿಗಳು ಸಿಗದ ಹಿನ್ನೆಲೆಯಲ್ಲಿ ತಿರುಪತಿಯತ್ತ ಹೊರಟಿತ್ತು. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇತ್ತ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಸಹೋದ್ಯೋಗಿಗಳ ದಾರುಣ ಸಾವು ಹಿನ್ನಲೆಯಲ್ಲಿ ನೀರವ ಮೌನ ಆವರಿಸಿದೆ.
Bangalore Shivajinagara police meet with a ghastly accident in Andhra by chasing Ganja Gang at Andhra, three dead on spot including Police Sub Inspector.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm