ಬ್ರೇಕಿಂಗ್ ನ್ಯೂಸ್
25-07-22 03:18 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 25 : ಬಿಜೆಪಿಯ ನಾಲ್ಕು ಜನ ಪಾಪಿಗಳು ಸೇರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಸಾಗರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ನಾಲ್ಕು ಜನರು ಸೇರಿ ಯಡಿಯೂರಪ್ಪ ಕುಟುಂಬವನ್ನು ತೆಗೀಬೇಕು ಅಂತಾ ಕಣ್ಣೀರು ಹಾಕಿಸಿ ರಾಜೀನಾಮೆ ನೀಡುವಂತೆ ಮಾಡಿಸಿದ್ದರು. ಇವರಿಗೆ ಯಡಿಯೂರಪ್ಪರ ನೋವು, ಶಾಪ ತಟ್ಟದೆ ಬಿಡುವುದಿಲ್ಲ ಎಂದರು.

ಬಿಜೆಪಿಯವರೇ ಈಶ್ವರಪ್ಪ ಅವರಿಗೆ ಹೊಂಡ ತೆಗೆಯುತ್ತಾರೆ. ಈಶ್ವರಪ್ಪ ತಮ್ಮ ರಾಜಕೀಯ ನಾಯಕತ್ವ ಉಳಿಸಿಕೊಳ್ಳಲು ಮಾಡಿರುವ ಕುತಂತ್ರ ಇದು. ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬದ ಶಾಪ ಈಶ್ವರಪ್ಪನವರಿಗೆ ತಟ್ಟದೆ ಇರಲ್ಲ. ರಾಜ್ಯದಲ್ಲಿ ಅವರ ಸರ್ಕಾರ ಇದೆ. ಹಾಗಾಗಿ ಅವರಿಗೆ ಬೇಕಾದ ಹಾಗೇ ರಿಪೋರ್ಟ್ ಮಾಡಿಸಿಕೊಂಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪಿಸಿದರು.

ಸಂತೋಷ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಿ. ಹರ್ಷ ಒಬ್ಬನೇ ಹಿಂದೂ ನಾ? ಸಂತೋಷ್ ಪಾಟೀಲ್ ಕೂಡ ಹಿಂದೂ ತಾನೇ. ಅಲ್ಲದೇ ಅವರ ಪಕ್ಷದ ಕಾರ್ಯಕರ್ತ. ಅವರಿಗೇಕೆ ಬಿಜೆಪಿ ನಾಯಕರು ಆರ್ಥಿಕ ಸಹಾಯ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಧರ್ಮ ವಿರೋಧಿ ಹೇಳಿಕೆ ನೀಡುವವರನ್ನು ಬಂಧಿಸಲು ಕಠಿಣ ಕಾನೂನು ಜಾರಿಗೆ ತನ್ನಿ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಅಷ್ಟು ಹಾನಿಯಾದರೂ ಒಮ್ಮೆ ಮಾತ್ರ ಭೇಟಿ ನೀಡಿ ಹೋಗಿದ್ದಾರೆ. ಇವರಿಗೆ ಜನರ ಹಿತ ಮುಖ್ಯ ಅಲ್ಲ ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದರು.
BSY Retirement, 4 people are the main reason and responsible for his Retirement from karnataka Poll Politics slams Belur Gopalkrishna in Shivamogga.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm