ಬ್ರೇಕಿಂಗ್ ನ್ಯೂಸ್
25-07-22 10:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25 : ಇತ್ತೀಚೆಗೆ ಯಡಿಯೂರಪ್ಪ ಕಾಲದಲ್ಲಿ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರನ್ನು ವಜಾ ಮಾಡಲಾಗಿತ್ತು. ಇದೀಗ 22 ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರನ್ನ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ಶಾಸಕರು, ಮಾಜಿ ಶಾಸಕರು ಅಧ್ಯಕ್ಷರಿರುವ ನಿಗಮ ಮಂಡಳಿ ಬಿಟ್ಟು ಉಳಿದ 54 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಇದೀಗ ಆ ಪೈಕಿ 22 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿದೆ. ಕರಾವಳಿ ಭಾಗದ ಇಬ್ಬರ ಹೆಸರು ಇದೆ. ಗೇರು ಅಭಿವೃದ್ಧಿ ನಿಗಮದ ಮಣಿರಾಜ ಶೆಟ್ಟಿ ಮೊನ್ನೆ ತೆರವಾದ ಪಟ್ಟಿಯಲ್ಲೂ ಇತ್ತು. ಇದೀಗ ಹೊಸ ಪಟ್ಟಿಯಲ್ಲಿ ಅದೇ ಹೆಸರು ಗೇರು ಅಭಿವೃದ್ಧಿ ನಿಗಮಕ್ಕಿದೆ. ಸುಳ್ಯ ಮೂಲದ ಎವಿ ತೀರ್ಥರಾಮ ಅವರನ್ನು ಮೀನುಗಾರಿಕಾ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಾಮಾನ್ಯವಾಗಿ ಮೀನುಗಾರಿಕಾ ವೃತ್ತಿ ನಡೆಸುವ ಬೋವಿ, ಖಾರ್ವಿ, ಮೊಗವೀರ ಸಮುದಾಯದವರಿಗೆ ಈ ನಿಗಮದ ಹೊಣೆ ಕೊಡುತ್ತಿದ್ದರು. ಈ ಬಾರಿ ಸುಳ್ಯ ಮೂಲದ ವ್ಯಕ್ತಿಗೆ ನಿಗಮದ ಹೊಣೆ ನೀಡಿರುವುದು ಬಿಜೆಪಿಯಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ನಿಗಮ-ಮಂಡಳಿಗೆ ಹೊಸ ಅಧ್ಯಕ್ಷರ ಪಟ್ಟಿ ಇಂತಿದೆ.
1. ಸಫಾಯಿ ಕರ್ಮಚಾರಿ ನಿಗಮ - ಕೆ.ಪಿ.ವೆಂಕಟೇಶ್
2. ಅಲೆಮಾರಿ ಅಭಿವೃದ್ಧಿ ನಿಗಮ-ದೇವೇಂದ್ರನಾಥ್.ಕೆ
3. ಕಾಡುಗೊಲ್ಲ ಅಭಿವೃದ್ಧಿ ನಿಗಮ-ಚಂಗಾವರ ಮಾರಣ್ಣ
4. ವಸ್ತುಪ್ರದರ್ಶನ ಪ್ರಾಧಿಕಾರ-ಮಿರ್ಲೆ ಶ್ರೀನಿವಾಸ
5. ಮಾವು ಅಭಿವೃದ್ಧಿ ನಿಗಮ-ಎಂ.ಕೆ.ವಾಸುದೇವ್
6. ದ್ರಾಕ್ಷಿ, ವೈನ್ ಬೋರ್ಡ್ - N.M.ರವಿ ನಾರಾಯಣ ರೆಡ್ಡಿ
7. ರೇಷ್ಮೆ ಮಾರಾಟ ಮಂಡಳಿ - ಬಿ.ಸಿ.ನಾರಾಯಣ ಸ್ವಾಮಿ
8. ಲಿಂಬೆ ಅಭಿವೃದ್ಧಿ ಮಂಡಳಿ-ಚಂದ್ರಶೇಖರ ಕವಟಗಿ
9. ಗೇರು ಅಭಿವೃದ್ಧಿ ನಿಗಮ-ಮಣಿರಾಜ ಶೆಟ್ಟಿ
10.ಪಶ್ಚಿಮ ಘಟ್ಟಗಳ ಕಾರ್ಯಪಡೆ - ಗೋವಿಂದ ನಾಯ್ಕ್
11. ಮೈಸೂರು ಮೃಗಾಲಯ ಪ್ರಾಧಿಕಾರ-M.ಶಿವಕುಮಾರ್
12. ಅರಣ್ಯ ಅಭಿವೃದ್ಧಿ ನಿಗಮ-ರೇವಣ್ಣಪ್ಪ ಕೋಳಗಿ
13. ಜೀವ ವೈವಿದ್ಯ ಮಂಡಳಿ - ರವಿಕಾಳಪ್ಪ
14. ಕುರಿ, ಉಣ್ಣೆ ಅಭಿವೃದ್ಧಿ ನಿಗಮ-ಧರ್ಮಣ್ಣ ದೊಡ್ಡಮನೆ
15. ಮೀನುಗಾರಿಕೆ ಅಭಿವೃದ್ಧಿ ನಿಗಮ- ಎ.ವಿ ತೀರ್ಥರಾಮ
16. ಪೇಂಟ್ಸ್, ವಾರ್ನಿಷ್ - ರಘು ಕೌಟಿಲ್ಯ
17. ಜವಳಿ ಅಭಿವೃದ್ಧಿ ನಿಗಮ- ವಿರೂಪಾಕ್ಷಗೌಡ
18. ಖಾದಿ, ಗ್ರಾಮೋದ್ಯೋಗ ಮಂಡಳಿ-K.V.ನಾಗರಾಜ್
19. ಕರಕುಶಲ ಅಭಿವೃದ್ಧಿ ನಿಗಮ-ಮಾರುತಿ ಅಷ್ಟಗಿ
20. ತುಂಗಾಭದ್ರ ಯೋಜನೆ (ಕಾಡಾ)-ಕೊಲ್ಲಾ ಶೇಷಗಿರಿ ರಾವ್
21. ಕಾವೇರಿ ಜಲಾನಯನ ಯೋಜನೆ-ನಿಜಗುಣರಾಜು
22. ಮದ್ಯಪಾನ ಸಂಯಮ ಮಂಡಳಿ-ಮಲ್ಲಿಕಾರ್ಜುನ ತುಬಾಕಿ
22 board and corporation presidents list announced by Karnataka state government.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm