ಬ್ರೇಕಿಂಗ್ ನ್ಯೂಸ್
28-07-22 11:04 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28 : ಬಿಜೆಪಿ ಕಾರ್ಯಕರ್ತನ ಕೊಲೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ಒಳಗಡೆಯೇ ಆಕ್ರೋಶದ ಕಿಡಿ ಎದ್ದಿದ್ದು ರಾಜ್ಯ ಸರಕಾರದ ಮೇಲೆ ತೀವ್ರ ಒತ್ತಡ ಬಿದ್ದಿದೆ. ಇದೇ ವೇಳೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮುಖ್ಯಮಂತ್ರಿ ಬೊಮ್ಮಾಯಿಗೆ ಫೋನ್ ಮಾಡಿ ತೀವ್ರ ಚಾಟಿ ಬೀಸಿದ್ದಾರೆ. ಹೈಕಮಾಂಡ್ ಚಾಟಿಯಿಂದ ಎಚ್ಚೆತ್ತ ಸಿಎಂ ಬೊಮ್ಮಾಯಿ ತನ್ನ ಸರಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಏರ್ಪಡಿಸಿದ ಜನೋತ್ಸವ ಸಮಾರಂಭವನ್ನು ರಾತ್ರೋರಾತ್ರಿ ಬಂದ್ ಮಾಡಿದ್ದಾರೆ.
ನನ್ನ ಸರ್ಕಾರಕ್ಕೆ ಒಂದು ವರ್ಷ, ಯಡಿಯೂರಪ್ಪ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿದೆ. ಜನಪರವಾಗಿ ಮಾಡಿರುವ ಕೆಲಸಕ್ಕೆ ಜನೋತ್ಸವ ಮಾಡಲು ನಿಶ್ಚಯಿಸಿದ್ದೆವು. ಆದರೆ ಕಾರ್ಯಕರ್ತರ ನೋವಿನ ಮಧ್ಯೆ ಜನೋತ್ಸವ ಮಾಡುವುದು ಬೇಡವೆಂದು ಕಾರ್ಯಕ್ರಮ ರದ್ದು ಮಾಡುತ್ತಿದ್ದೇನೆ ಎಂದು ಹೇಳಿದರು.
ಹತ್ಯೆ ಘಟನೆ ಮತ್ತು ಕಾರ್ಯಕರ್ತರ ಆಕ್ರೋಶದ ಬಗ್ಗೆ ಮಾಹಿತಿ ಪಡೆದಿರುವ ಹೈಕಮಾಂಡ್, ಇಂಥ ಸಂದರ್ಭದಲ್ಲಿ ಜನೋತ್ಸವ ಮಾಡಿ ಏನು ಸಂದೇಶ ಕೊಡುತ್ತಿದ್ದೀರಿ ಎಂದು ತರಾಟೆಗೆತ್ತಿಕೊಂಡಿತ್ತು. ಸ್ವತಃ ರಾಷ್ಟ್ರೀಯ ಅಧ್ಯಕ್ಷರೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದೆಂದು ಹೇಳಲಾಗಿತ್ತು. ಆದರೆ ನಡ್ಡಾ ಫೋನ್ ಮಾಡಿ, ತನಗೆ ರಕ್ತದೋಕುಳಿಯ ಸ್ವಾಗತ ಬೇಡ ಎಂದು ಹೇಳಿದ್ದು ರಾಜ್ಯ ಬಿಜೆಪಿಗೆ ಶಾಕ್ ಆಗಿದೆ.
ಪ್ರವೀಣ್ ಹತ್ಯೆಯನ್ನು ಖಂಡಿಸಿ ಇಡೀ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹಲವು ಜಿಲ್ಲಾ ಘಟಕದಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ಜವಾಬ್ದಾರಿಗೆ ರಾಜಿನಾಮೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸಾಂತ್ವನ ಹೇಳಲು ಹೋಗಿದ್ದ ವೇಳೆ ಅವರ ಕಾರನ್ನೇ ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಹಲ್ಲೆಗೂ ಯತ್ನಿಸಲಾಗಿತ್ತು. ಇಂಥ ಬೆಳವಣಿಗೆ ಆಗಿದ್ದರೂ, ಕಾರ್ಯಕ್ರಮ ರದ್ದು ಪಡಿಸುವ ಇರಾದೆ ರಾಜ್ಯ ಬಿಜೆಪಿಗೆ ಇರಲಿಲ್ಲ. ಸಚಿವ ಸುಧಾಕರ್ ನೇತೃತ್ವದಲ್ಲಿ ಕಾರ್ಯಕ್ರಮ ಏರ್ಪಾಡು ಆಗಿತ್ತು. ಆದರೆ ಹೈಕಮಾಂಡ್ ಚಾಟಿ ಬೀಸುತ್ತಲೇ ರಾತ್ರೋರಾತ್ರಿ ಸುದ್ದಿಗೋಷ್ಟಿ ಕರೆದು ಮುಖ್ಯಮಂತ್ರಿಯೇ ಕಾರ್ಯಕ್ರಮ ರದ್ದುಪಡಿಸಿದ್ದಾರೆ.
Chief Minister Basavaraj Bommai, in the early hours of Thursday, 28 July 2022, called an emergency press meeting and announced that he would be cancelling all events celebrating his one-year anniversary as chief minister and three years of the BJP's rule in Karnataka.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm