ಬ್ರೇಕಿಂಗ್ ನ್ಯೂಸ್
02-08-22 10:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 2: ಒಂದೆಡೆ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡಿದ್ದರೆ, ಮತ್ತೊಂದೆಡೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ, ರಾಜ್ಯ ಬಿಜೆಪಿ ನಾಯಕರ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇಂಥ ಹೊತ್ತಲ್ಲೇ ಗೃಹ ಸಚಿವ ಅಮಿತ್ ಷಾ ದಿಢೀರ್ ಆಗಿ ರಾಜ್ಯಕ್ಕೆ ಬರುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುತ್ತಿರುವುದನ್ನು ದೃಢ ಪಡಿಸಿದ್ದಾರೆ. ಆಗಸ್ಟ್ 4ರಂದು ಬೆಂಗಳೂರಿನ ಖಾಸಗಿ ಹೋಟಲ್ನಲ್ಲಿ ನಡೆಯಲಿರುವ 'ಸಂಕಲ್ಪದಿಂದ ಸಿದ್ಧಿ' (ಸಂಕಲ್ಪ್ ಸೇ ಸಿದ್ಧಿ) ಸಮಾವೇಶದ ಮೂರನೇ ಆವೃತ್ತಿಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಅವರು ಬುಧವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದಿದ್ದಾರೆ.

ಕೇಂದ್ರ ಸಚಿವಾಲಯದ ಮಾಹಿತಿ ಪ್ರಕಾರ, ಬುಧವಾರ ರಾತ್ರಿ 8 ಗಂಟೆಗೆ ದೆಹಲಿಯಿಂದ ವಿಮಾನದಲ್ಲಿ ಹೊರಟು ರಾತ್ರಿ 11 ಗಂಟೆ ವೇಳೆಗೆ ಬೆಂಗಳೂರು ಎಚ್ಎಎಲ್ ನಿಲ್ದಾಣ ತಲುಪಲಿದ್ದಾರೆ. ನಂತರ ರೇರ್ಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟೆಂಡ್ ನಲ್ಲಿ ತಂಗಲಿದ್ದಾರೆ. ಮರುದಿನ ಬೆಳಗ್ಗೆ 11 ಗಂಟೆಯ ಕಾರ್ಯಕ್ರಮ ಮುಗಿಸಿ ಸಂಜೆ ವೇಳೆಗೆ ದೆಹಲಿಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಇದೆ. ಇದರ ನಡುವೆಯೇ, ರಾಜ್ಯ ಬಿಜೆಪಿ ಮತ್ತು ಕಾರ್ಯಕರ್ತರ ಆಕ್ರೋಶದ ಬಗ್ಗೆ ಅಮಿತ್ ಷಾ ವರದಿ ಪಡೆದುಕೊಳ್ಳಲಿದ್ದು ಒಂದೇ ವಾರದಲ್ಲಿ ಆ್ಯಕ್ಷನ್ ತಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ವಿಚಾರ ಹೈಕಮಾಂಡ್ ಅಂಗಳದಲ್ಲಿದ್ದು ಯಾವ ನಿರ್ಧಾರ ತಗೊಳ್ತಾರೆ ಎಂಬ ಕುತೂಹಲ ಎದ್ದಿದೆ.
Amit Shah to visit Bangalore on August 6th, chances of surgery in BJP party.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm