ಬ್ರೇಕಿಂಗ್ ನ್ಯೂಸ್
02-08-22 10:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 2: ಒಂದೆಡೆ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ ರಾಜ್ಯದೆಲ್ಲೆಡೆ ಸದ್ದು ಮಾಡಿದ್ದರೆ, ಮತ್ತೊಂದೆಡೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ, ರಾಜ್ಯ ಬಿಜೆಪಿ ನಾಯಕರ ಬಗ್ಗೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇಂಥ ಹೊತ್ತಲ್ಲೇ ಗೃಹ ಸಚಿವ ಅಮಿತ್ ಷಾ ದಿಢೀರ್ ಆಗಿ ರಾಜ್ಯಕ್ಕೆ ಬರುತ್ತಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಬರುತ್ತಿರುವುದನ್ನು ದೃಢ ಪಡಿಸಿದ್ದಾರೆ. ಆಗಸ್ಟ್ 4ರಂದು ಬೆಂಗಳೂರಿನ ಖಾಸಗಿ ಹೋಟಲ್ನಲ್ಲಿ ನಡೆಯಲಿರುವ 'ಸಂಕಲ್ಪದಿಂದ ಸಿದ್ಧಿ' (ಸಂಕಲ್ಪ್ ಸೇ ಸಿದ್ಧಿ) ಸಮಾವೇಶದ ಮೂರನೇ ಆವೃತ್ತಿಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಅವರು ಬುಧವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದಿದ್ದಾರೆ.
ಕೇಂದ್ರ ಸಚಿವಾಲಯದ ಮಾಹಿತಿ ಪ್ರಕಾರ, ಬುಧವಾರ ರಾತ್ರಿ 8 ಗಂಟೆಗೆ ದೆಹಲಿಯಿಂದ ವಿಮಾನದಲ್ಲಿ ಹೊರಟು ರಾತ್ರಿ 11 ಗಂಟೆ ವೇಳೆಗೆ ಬೆಂಗಳೂರು ಎಚ್ಎಎಲ್ ನಿಲ್ದಾಣ ತಲುಪಲಿದ್ದಾರೆ. ನಂತರ ರೇರ್ಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟೆಂಡ್ ನಲ್ಲಿ ತಂಗಲಿದ್ದಾರೆ. ಮರುದಿನ ಬೆಳಗ್ಗೆ 11 ಗಂಟೆಯ ಕಾರ್ಯಕ್ರಮ ಮುಗಿಸಿ ಸಂಜೆ ವೇಳೆಗೆ ದೆಹಲಿಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಇದೆ. ಇದರ ನಡುವೆಯೇ, ರಾಜ್ಯ ಬಿಜೆಪಿ ಮತ್ತು ಕಾರ್ಯಕರ್ತರ ಆಕ್ರೋಶದ ಬಗ್ಗೆ ಅಮಿತ್ ಷಾ ವರದಿ ಪಡೆದುಕೊಳ್ಳಲಿದ್ದು ಒಂದೇ ವಾರದಲ್ಲಿ ಆ್ಯಕ್ಷನ್ ತಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ವಿಚಾರ ಹೈಕಮಾಂಡ್ ಅಂಗಳದಲ್ಲಿದ್ದು ಯಾವ ನಿರ್ಧಾರ ತಗೊಳ್ತಾರೆ ಎಂಬ ಕುತೂಹಲ ಎದ್ದಿದೆ.
Amit Shah to visit Bangalore on August 6th, chances of surgery in BJP party.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 07:32 pm
Mangalore Correspondent
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am