ಬ್ರೇಕಿಂಗ್ ನ್ಯೂಸ್
03-08-20 11:25 am Bangalore Correspondent ಕರ್ನಾಟಕ
ಬೆಂಗಳೂರು : ಎಂಥಹ ಕಾಲ ಬಂದಿದೆ ನೋಡಿ, ವೈದ್ಯೋ ನಾರಾಯಣ ಅಂತ ಹೇಳ್ತೀವಿ. ಆದರೆ ಅವರೇ ಕಾಮುಕರಾದರೆ. ಹೌದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಕರೋನಾ ರೋಗಿಯ ಮೇಲೂ ಕಾಮದ ವಕ್ರ ದೃಷ್ಟಿ ಬೀರಿದ್ದಾರೆ. ಜುಲೈ 25ರಂದು ನಡೆದ ಈ ಘಟನೆ ಈಗ ಮುನ್ನೆಲೆಗೆ ಬಂದಿದೆ.
ಕರೋನಾದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ವೈದ್ಯರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳೇ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾತ್ರಿ ಹೊತ್ತು ರೋಗಿಯಿದ್ದ ವಾರ್ಡ್ಗೆ ಬಂದಿದ್ದ ವೈದ್ಯರು ಆಕೆಯ ಖಾಸಗಿ ಭಾಗಗಳನ್ನು ಮುಟ್ಟಿ, ಅಸಹಜವಾಗಿ ವರ್ತಿಸಿದ್ದರು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ದಾಖಲಾಗಿದ್ದ ರೋಗಿ ತನಗಾದ ಕೆಟ್ಟ ಅನುಭವವನ್ನು ಅಲ್ಲಿನ ನೋಡಲ್ ಆಫೀಸರ್ ಬಳಿ ಹೇಳಿಕೊಂಡಿದ್ದರು. ನಂತರ ನೋಡಲ್ ಅಧಿಕಾರಿ ಈ ವಿಷಯವನ್ನು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದರು. ಪೊಲೀಸರ ಪ್ರಕಾರ, ಆಸ್ಪತ್ರೆಯ ಅಧಿಕಾರಿಗಳು ಆ ಘಟನೆಯ ಬಗೆಗಾಗಲಿ ಅಥವಾ ಆರೋಪಿ ವೈದ್ಯರ ಬಗ್ಗೆಯಾಗಲಿ ಸಂಪೂರ್ಣ ಮಾಹಿತಿ ನೀಡಿಲ್ಲ.
ಈ ಘಟನೆಯ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಂತರಿಕ ತನಿಖೆ ನಡೆಸಲಾಗುತ್ತಿದೆ. ಅದಾದ ಬಳಿಕ ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗುವುದು ಎಂದು ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಕರೋನಾ ಸೋಂಕಿತರಿಗೆ ಮೊದಲೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಇನ್ನು ಚಿಕಿತ್ಸೆ ಕೊಡುವ ಆಸ್ಪತ್ರೆಗಳಲ್ಲಿ ಇಂತಹ ಘಟನೆಗಳು ನಡೆದರೆ ಕರೋನಾ ಸೋಂಕಿತರು ಯಾವ ನಂಬಿಕೆಯ ಮೇಲೆ ಆಸ್ಪತ್ರೆಗೆ ದಾಖಲಾಗಬೇಕು ಅನ್ನೋದೇ ಈಗ ಯಕ್ಷ ಪ್ರಶ್ನೆ.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm