ಬ್ರೇಕಿಂಗ್ ನ್ಯೂಸ್
03-08-20 11:25 am Bangalore Correspondent ಕರ್ನಾಟಕ
ಬೆಂಗಳೂರು : ಎಂಥಹ ಕಾಲ ಬಂದಿದೆ ನೋಡಿ, ವೈದ್ಯೋ ನಾರಾಯಣ ಅಂತ ಹೇಳ್ತೀವಿ. ಆದರೆ ಅವರೇ ಕಾಮುಕರಾದರೆ. ಹೌದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಕರೋನಾ ರೋಗಿಯ ಮೇಲೂ ಕಾಮದ ವಕ್ರ ದೃಷ್ಟಿ ಬೀರಿದ್ದಾರೆ. ಜುಲೈ 25ರಂದು ನಡೆದ ಈ ಘಟನೆ ಈಗ ಮುನ್ನೆಲೆಗೆ ಬಂದಿದೆ.
ಕರೋನಾದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ವೈದ್ಯರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳೇ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾತ್ರಿ ಹೊತ್ತು ರೋಗಿಯಿದ್ದ ವಾರ್ಡ್ಗೆ ಬಂದಿದ್ದ ವೈದ್ಯರು ಆಕೆಯ ಖಾಸಗಿ ಭಾಗಗಳನ್ನು ಮುಟ್ಟಿ, ಅಸಹಜವಾಗಿ ವರ್ತಿಸಿದ್ದರು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ದಾಖಲಾಗಿದ್ದ ರೋಗಿ ತನಗಾದ ಕೆಟ್ಟ ಅನುಭವವನ್ನು ಅಲ್ಲಿನ ನೋಡಲ್ ಆಫೀಸರ್ ಬಳಿ ಹೇಳಿಕೊಂಡಿದ್ದರು. ನಂತರ ನೋಡಲ್ ಅಧಿಕಾರಿ ಈ ವಿಷಯವನ್ನು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದರು. ಪೊಲೀಸರ ಪ್ರಕಾರ, ಆಸ್ಪತ್ರೆಯ ಅಧಿಕಾರಿಗಳು ಆ ಘಟನೆಯ ಬಗೆಗಾಗಲಿ ಅಥವಾ ಆರೋಪಿ ವೈದ್ಯರ ಬಗ್ಗೆಯಾಗಲಿ ಸಂಪೂರ್ಣ ಮಾಹಿತಿ ನೀಡಿಲ್ಲ.
ಈ ಘಟನೆಯ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಂತರಿಕ ತನಿಖೆ ನಡೆಸಲಾಗುತ್ತಿದೆ. ಅದಾದ ಬಳಿಕ ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗುವುದು ಎಂದು ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಕರೋನಾ ಸೋಂಕಿತರಿಗೆ ಮೊದಲೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಇನ್ನು ಚಿಕಿತ್ಸೆ ಕೊಡುವ ಆಸ್ಪತ್ರೆಗಳಲ್ಲಿ ಇಂತಹ ಘಟನೆಗಳು ನಡೆದರೆ ಕರೋನಾ ಸೋಂಕಿತರು ಯಾವ ನಂಬಿಕೆಯ ಮೇಲೆ ಆಸ್ಪತ್ರೆಗೆ ದಾಖಲಾಗಬೇಕು ಅನ್ನೋದೇ ಈಗ ಯಕ್ಷ ಪ್ರಶ್ನೆ.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm