ಬ್ರೇಕಿಂಗ್ ನ್ಯೂಸ್
03-08-20 11:25 am Bangalore Correspondent ಕರ್ನಾಟಕ
ಬೆಂಗಳೂರು : ಎಂಥಹ ಕಾಲ ಬಂದಿದೆ ನೋಡಿ, ವೈದ್ಯೋ ನಾರಾಯಣ ಅಂತ ಹೇಳ್ತೀವಿ. ಆದರೆ ಅವರೇ ಕಾಮುಕರಾದರೆ. ಹೌದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಕರೋನಾ ರೋಗಿಯ ಮೇಲೂ ಕಾಮದ ವಕ್ರ ದೃಷ್ಟಿ ಬೀರಿದ್ದಾರೆ. ಜುಲೈ 25ರಂದು ನಡೆದ ಈ ಘಟನೆ ಈಗ ಮುನ್ನೆಲೆಗೆ ಬಂದಿದೆ.
ಕರೋನಾದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ವೈದ್ಯರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳೇ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾತ್ರಿ ಹೊತ್ತು ರೋಗಿಯಿದ್ದ ವಾರ್ಡ್ಗೆ ಬಂದಿದ್ದ ವೈದ್ಯರು ಆಕೆಯ ಖಾಸಗಿ ಭಾಗಗಳನ್ನು ಮುಟ್ಟಿ, ಅಸಹಜವಾಗಿ ವರ್ತಿಸಿದ್ದರು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ದಾಖಲಾಗಿದ್ದ ರೋಗಿ ತನಗಾದ ಕೆಟ್ಟ ಅನುಭವವನ್ನು ಅಲ್ಲಿನ ನೋಡಲ್ ಆಫೀಸರ್ ಬಳಿ ಹೇಳಿಕೊಂಡಿದ್ದರು. ನಂತರ ನೋಡಲ್ ಅಧಿಕಾರಿ ಈ ವಿಷಯವನ್ನು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದರು. ಪೊಲೀಸರ ಪ್ರಕಾರ, ಆಸ್ಪತ್ರೆಯ ಅಧಿಕಾರಿಗಳು ಆ ಘಟನೆಯ ಬಗೆಗಾಗಲಿ ಅಥವಾ ಆರೋಪಿ ವೈದ್ಯರ ಬಗ್ಗೆಯಾಗಲಿ ಸಂಪೂರ್ಣ ಮಾಹಿತಿ ನೀಡಿಲ್ಲ.
ಈ ಘಟನೆಯ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಂತರಿಕ ತನಿಖೆ ನಡೆಸಲಾಗುತ್ತಿದೆ. ಅದಾದ ಬಳಿಕ ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗುವುದು ಎಂದು ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಕರೋನಾ ಸೋಂಕಿತರಿಗೆ ಮೊದಲೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಇನ್ನು ಚಿಕಿತ್ಸೆ ಕೊಡುವ ಆಸ್ಪತ್ರೆಗಳಲ್ಲಿ ಇಂತಹ ಘಟನೆಗಳು ನಡೆದರೆ ಕರೋನಾ ಸೋಂಕಿತರು ಯಾವ ನಂಬಿಕೆಯ ಮೇಲೆ ಆಸ್ಪತ್ರೆಗೆ ದಾಖಲಾಗಬೇಕು ಅನ್ನೋದೇ ಈಗ ಯಕ್ಷ ಪ್ರಶ್ನೆ.
04-06-26 07:35 pm
HK News Staffer
Pv Mohan: ಜೂನ್ 18ರಂದು ವಿಧಾನ ಪರಿಷತ್ ಚುನಾವಣೆ ;...
03-06-26 10:19 pm
ಡಿಕೆ ಯುಗಾರಂಭ ; ಎಲ್ಲಾ ಶಾಲಾ - ಕಾಲೇಜು ವಿದ್ಯಾರ್ಥಿ...
03-06-26 09:19 pm
DK Shivakumar New CM, 2026: ರಾಜ್ಯದಲ್ಲಿ ಡಿಕೆಶಿ...
03-06-26 05:41 pm
29ನೇ ಹರೆಯದಲ್ಲೇ ಸಚಿವ, ಬಂಗಾರಪ್ಪ- ಎಸ್ಸೆಂ ಕೃಷ್ಣ ಗ...
03-06-26 03:51 pm
04-06-26 04:19 pm
HK News Staffer
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
ನೀಟ್, ಸಿಬಿಎಸ್ಇ ಪರೀಕ್ಷೆ ಅಕ್ರಮ; ಸಚಿವ ಧರ್ಮೇಂದ್ರ...
02-06-26 10:40 am
ನಟ ವಿಜಯ್ ಹಾದಿಯಲ್ಲೇ ಅಣ್ಣಾಮಲೈ ! ಬಿಜೆಪಿ ಬಿಟ್ಟು ದ...
02-06-26 10:01 am
ಪ್ರಧಾನಿ ಮೋದಿ ಕರೆ ಎಫೆಕ್ಟ್ ; ದೇಶಾದ್ಯಂತ ಚಿನ್ನ ಖರ...
31-05-26 09:25 pm
04-06-26 12:51 pm
HK News Staffer
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
Ivan Dsouza, Congress: ಐವಾನ್ ಡಿಸೋಜಗೆ ಸಚಿವ ಸ್ಥ...
01-06-26 07:05 pm
04-06-26 09:41 pm
HK News Staffer
ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ ನಾಲ್...
04-06-26 05:31 pm
ದೆಹಲಿ ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ ; 21 ಮಂದಿ...
04-06-26 03:29 pm
ಉಡುಪಿ ; ನೀರು ಸೇದುತ್ತಿದ್ದಾಗ ಬಾವಿಯೊಳಕ್ಕೆ ಬಿದ್ದ...
04-06-26 12:49 pm
ಮೊಬೈಲ್ ಚಟ ಬಿಟ್ಟು ಬಿಡುವಂತೆ ಗದರಿದ ತಾಯಿ; ಸುಳ್ಯದಲ...
02-06-26 09:27 pm