ಬ್ರೇಕಿಂಗ್ ನ್ಯೂಸ್
05-08-22 12:20 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 5: ಮಡಿಕೇರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನಕ್ಕೆ ತೀವ್ರ ತೊಂದರೆಯಾಗಿದೆ. ಮಡಿಕೇರಿಯ ಚೆಂಬು, ಗಾಳಿಬೀಡು, ಜೋಡುಪಾಲ, ಸಂಪಾಜೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಕಾರಣ ಅಲ್ಲಿನ ನಿವಾಸಿಗಳು ಮತ್ತೆ ದುರಂತ ಮರುಕಳಿಸುತ್ತಾ ಎನ್ನುವ ಆತಂಕಕ್ಕೆ ಒಳಗಾಗಿದ್ದಾರೆ.
ಮಳೆಯಿಂದಾಗಿ ಚೆಟ್ಟಿಮಾನಿ, ಮಾರ್ಪಡ್ಕ ಗ್ರಾಮಗಳಲ್ಲಿ ಸೇತುವೆಗಳು ಕೊಚ್ಚಿ ಹೋಗಿವೆ. ಸಂಪಾಜೆ, ಚೆಂಬು, ಕರಿಕೆ, ಕೊಯನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಹಲವೆಡೆ ರಸ್ತೆ ಕುಸಿದು ಹೋಗಿದೆ. ಚೆಂಬು, ಗೂನಡ್ಕ, ದಬ್ಬಡ್ಕ ಭಾಗದಲ್ಲಿ ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಲ್ಲುಗುಂಡಿ - ಚೆಟ್ಟಿಮಾನಿ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಸೇತುವೆ ಬಿರುಕು ಬಿಟ್ಟಿದ್ದರಿಂದ ಚೆಟ್ಟಿಮಾನಿಯ 60 ಕುಟುಂಬಗಳ ಜನರು ಸುಮಾರು 13 ಕಿಲೋ ಮೀಟರ್ ನಡೆದುಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಭಾಗಮಂಡಲ ಕರಿಕೆ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತವಾಗಿದೆ. ಭಾಗಮಂಡಲದಿಂದ 10 ಕಿಲೋ ಮೀಟರ್ ದೂರದಲ್ಲಿ ಭೂಕುಸಿತವಾಗಿದ್ದು ಗುರುವಾರ ಇಡೀ ದಿನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಬೆಟ್ಟದ ಮೇಲ್ಭಾಗದಲ್ಲಿ ಭಾರೀ ಭೂಕುಸಿತವಾಗಿದ್ದು, ಬೃಹತ್ ಗಾತ್ರದ ಬಂಡೆ, ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
Madikeri heavy rains sampaje people in great fear.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm