ಬ್ರೇಕಿಂಗ್ ನ್ಯೂಸ್
05-08-22 12:20 pm HK News Desk ಕರ್ನಾಟಕ
ಮಡಿಕೇರಿ, ಆಗಸ್ಟ್ 5: ಮಡಿಕೇರಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನಕ್ಕೆ ತೀವ್ರ ತೊಂದರೆಯಾಗಿದೆ. ಮಡಿಕೇರಿಯ ಚೆಂಬು, ಗಾಳಿಬೀಡು, ಜೋಡುಪಾಲ, ಸಂಪಾಜೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಕಾರಣ ಅಲ್ಲಿನ ನಿವಾಸಿಗಳು ಮತ್ತೆ ದುರಂತ ಮರುಕಳಿಸುತ್ತಾ ಎನ್ನುವ ಆತಂಕಕ್ಕೆ ಒಳಗಾಗಿದ್ದಾರೆ.
ಮಳೆಯಿಂದಾಗಿ ಚೆಟ್ಟಿಮಾನಿ, ಮಾರ್ಪಡ್ಕ ಗ್ರಾಮಗಳಲ್ಲಿ ಸೇತುವೆಗಳು ಕೊಚ್ಚಿ ಹೋಗಿವೆ. ಸಂಪಾಜೆ, ಚೆಂಬು, ಕರಿಕೆ, ಕೊಯನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಹಲವೆಡೆ ರಸ್ತೆ ಕುಸಿದು ಹೋಗಿದೆ. ಚೆಂಬು, ಗೂನಡ್ಕ, ದಬ್ಬಡ್ಕ ಭಾಗದಲ್ಲಿ ಹೊಳೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಲ್ಲುಗುಂಡಿ - ಚೆಟ್ಟಿಮಾನಿ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಸೇತುವೆ ಬಿರುಕು ಬಿಟ್ಟಿದ್ದರಿಂದ ಚೆಟ್ಟಿಮಾನಿಯ 60 ಕುಟುಂಬಗಳ ಜನರು ಸುಮಾರು 13 ಕಿಲೋ ಮೀಟರ್ ನಡೆದುಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಭಾಗಮಂಡಲ ಕರಿಕೆ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತವಾಗಿದೆ. ಭಾಗಮಂಡಲದಿಂದ 10 ಕಿಲೋ ಮೀಟರ್ ದೂರದಲ್ಲಿ ಭೂಕುಸಿತವಾಗಿದ್ದು ಗುರುವಾರ ಇಡೀ ದಿನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಬೆಟ್ಟದ ಮೇಲ್ಭಾಗದಲ್ಲಿ ಭಾರೀ ಭೂಕುಸಿತವಾಗಿದ್ದು, ಬೃಹತ್ ಗಾತ್ರದ ಬಂಡೆ, ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ.
Madikeri heavy rains sampaje people in great fear.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm