ಬ್ರೇಕಿಂಗ್ ನ್ಯೂಸ್
05-08-22 07:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಕೇಂದ್ರ ಸರಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಜಾರಿಗೊಳಿಸಿದ್ದ ಹಳೆ ವಾಹನಗಳ ಗುಜರಿಗೆ ಹಾಕುವ ಸ್ಕ್ರಾಪಿಂಗ್ ನಿಯಮವನ್ನು ರಾಜ್ಯದಲ್ಲೂ ಜಾರಿಗೆ ತರಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು ತಕ್ಷಣದಿಂದಲೇ ಜಾರಿಗೆ ತರುವಂತೆ ಸಾರಿಗೆ ಇಲಾಖೆಗೆ ಸೂಚಿಸಿದ್ದಾರೆ.
ಮೋಟಾರ್ ವಾಹನ ಕಾಯ್ದೆ - 2021 (ರಿಜಿಸ್ಟ್ರೇಷನ್ ಮತ್ತು ವಾಹನ ಚಾಲನಾ ಪರವಾನಗಿ ಸ್ಕ್ರಾಫ್ ಫೆಸಿಲಿಟಿ) ಜಾರಿಗೆ ತರುವ ಬಗ್ಗೆ ಕೇಂದ್ರ ಸರ್ಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ನಿಯಮವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಾಲಿನ್ಯ ಮತ್ತು ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಹಳೆಯ ವಾಹನಗಳನ್ನು ತೆರವುಗೊಳಿಸಲು ಹಳೆ ವಾಹನಗಳ ಗುಜರಿಗೆ ಹಾಕುವ ನೀತಿಯನ್ನು ಕಳೆದ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಈ ನಿಯಮದಡಿ ವಾಹನ ಮಾಲೀಕರು 15 ವರ್ಷಗಳ ನಂತರ ನೋಂದಣಿ ಮುಗಿದ ತಮ್ಮ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸಾಧ್ಯವಾಗುತ್ತದೆ. ದೆಹಲಿಯಲ್ಲಿ ಡೀಸೆಲ್ ವಾಹನಗಳಿಗೆ 10 ವರ್ಷಗಳ ನಂತರ ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷಗಳಿಗೆ ನೋಂದಣಿ ಕೊನೆಗೊಳ್ಳುವಂತೆ ನೀತಿ ಮಾಡಲಾಗಿದೆ. ಆಬಳಿಕ ವಾಹನ ಸಾಮರ್ಥ್ಯ ಅನುಸರಿಸಿ ಪರವಾನಗಿ ನವೀಕರಿಸುವುದಿದ್ದರೆ ಹಲವು ಪಟ್ಟು ಹೆಚ್ಚು ದಂಡ ಕಟ್ಟಬೇಕಾಗುತ್ತದೆ.
ಇದೇ ವೇಳೆ, ಸ್ಕ್ರ್ಯಾಪೇಜ್ ನೀತಿಯು ಹಳೆಯ ವಾಹನಗಳನ್ನು ತೆಗೆದುಹಾಕುವುದರ ಜೊತೆಗೆ ಹೊಸ ಆಟೋಮೊಬೈಲ್ ಉದ್ಯಮಕ್ಕೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. 2023ರ ಬಳಿಕ ಎಲ್ಲ ರೀತಿಯ ಭಾರೀ ವಾಣಿಜ್ಯ ವಾಹನಗಳು ಕಡ್ಡಾಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಇದೇ ನೀತಿಯು ಜೂನ್ 2024 ರಿಂದ ಖಾಸಗಿ ಮತ್ತು ಇತರ ವಾಹನಗಳಿಗೂ ಅನ್ವಯಿಸಲಿದೆ. ಆದರೆ ರಾಜ್ಯದಲ್ಲಿ ದೆಹಲಿಯ ನೀತಿಗಳೇ ಇರಲಿವೆಯಾ, ವಾಹನಗಳ ಪರವಾನಗಿ ಅವಧಿಯನ್ನು ಹೆಚ್ಚಿಸುತ್ತಾರಾ ಅನ್ನುವ ಬಗ್ಗೆ ರಾಜ್ಯ ಸರಕಾರ ಸ್ಪಷ್ಟ ಪಡಿಸಿಲ್ಲ.
Govt vehicle scrappage policy implements in Karnataka state
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm