ಬ್ರೇಕಿಂಗ್ ನ್ಯೂಸ್
05-08-22 07:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಕೇಂದ್ರ ಸರಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಜಾರಿಗೊಳಿಸಿದ್ದ ಹಳೆ ವಾಹನಗಳ ಗುಜರಿಗೆ ಹಾಕುವ ಸ್ಕ್ರಾಪಿಂಗ್ ನಿಯಮವನ್ನು ರಾಜ್ಯದಲ್ಲೂ ಜಾರಿಗೆ ತರಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು ತಕ್ಷಣದಿಂದಲೇ ಜಾರಿಗೆ ತರುವಂತೆ ಸಾರಿಗೆ ಇಲಾಖೆಗೆ ಸೂಚಿಸಿದ್ದಾರೆ.
ಮೋಟಾರ್ ವಾಹನ ಕಾಯ್ದೆ - 2021 (ರಿಜಿಸ್ಟ್ರೇಷನ್ ಮತ್ತು ವಾಹನ ಚಾಲನಾ ಪರವಾನಗಿ ಸ್ಕ್ರಾಫ್ ಫೆಸಿಲಿಟಿ) ಜಾರಿಗೆ ತರುವ ಬಗ್ಗೆ ಕೇಂದ್ರ ಸರ್ಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ನಿಯಮವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಾಲಿನ್ಯ ಮತ್ತು ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಹಳೆಯ ವಾಹನಗಳನ್ನು ತೆರವುಗೊಳಿಸಲು ಹಳೆ ವಾಹನಗಳ ಗುಜರಿಗೆ ಹಾಕುವ ನೀತಿಯನ್ನು ಕಳೆದ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಈ ನಿಯಮದಡಿ ವಾಹನ ಮಾಲೀಕರು 15 ವರ್ಷಗಳ ನಂತರ ನೋಂದಣಿ ಮುಗಿದ ತಮ್ಮ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸಾಧ್ಯವಾಗುತ್ತದೆ. ದೆಹಲಿಯಲ್ಲಿ ಡೀಸೆಲ್ ವಾಹನಗಳಿಗೆ 10 ವರ್ಷಗಳ ನಂತರ ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷಗಳಿಗೆ ನೋಂದಣಿ ಕೊನೆಗೊಳ್ಳುವಂತೆ ನೀತಿ ಮಾಡಲಾಗಿದೆ. ಆಬಳಿಕ ವಾಹನ ಸಾಮರ್ಥ್ಯ ಅನುಸರಿಸಿ ಪರವಾನಗಿ ನವೀಕರಿಸುವುದಿದ್ದರೆ ಹಲವು ಪಟ್ಟು ಹೆಚ್ಚು ದಂಡ ಕಟ್ಟಬೇಕಾಗುತ್ತದೆ.
ಇದೇ ವೇಳೆ, ಸ್ಕ್ರ್ಯಾಪೇಜ್ ನೀತಿಯು ಹಳೆಯ ವಾಹನಗಳನ್ನು ತೆಗೆದುಹಾಕುವುದರ ಜೊತೆಗೆ ಹೊಸ ಆಟೋಮೊಬೈಲ್ ಉದ್ಯಮಕ್ಕೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. 2023ರ ಬಳಿಕ ಎಲ್ಲ ರೀತಿಯ ಭಾರೀ ವಾಣಿಜ್ಯ ವಾಹನಗಳು ಕಡ್ಡಾಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಇದೇ ನೀತಿಯು ಜೂನ್ 2024 ರಿಂದ ಖಾಸಗಿ ಮತ್ತು ಇತರ ವಾಹನಗಳಿಗೂ ಅನ್ವಯಿಸಲಿದೆ. ಆದರೆ ರಾಜ್ಯದಲ್ಲಿ ದೆಹಲಿಯ ನೀತಿಗಳೇ ಇರಲಿವೆಯಾ, ವಾಹನಗಳ ಪರವಾನಗಿ ಅವಧಿಯನ್ನು ಹೆಚ್ಚಿಸುತ್ತಾರಾ ಅನ್ನುವ ಬಗ್ಗೆ ರಾಜ್ಯ ಸರಕಾರ ಸ್ಪಷ್ಟ ಪಡಿಸಿಲ್ಲ.
Govt vehicle scrappage policy implements in Karnataka state
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm