ಬ್ರೇಕಿಂಗ್ ನ್ಯೂಸ್
05-08-22 07:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಕೇಂದ್ರ ಸರಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಜಾರಿಗೊಳಿಸಿದ್ದ ಹಳೆ ವಾಹನಗಳ ಗುಜರಿಗೆ ಹಾಕುವ ಸ್ಕ್ರಾಪಿಂಗ್ ನಿಯಮವನ್ನು ರಾಜ್ಯದಲ್ಲೂ ಜಾರಿಗೆ ತರಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು ತಕ್ಷಣದಿಂದಲೇ ಜಾರಿಗೆ ತರುವಂತೆ ಸಾರಿಗೆ ಇಲಾಖೆಗೆ ಸೂಚಿಸಿದ್ದಾರೆ.
ಮೋಟಾರ್ ವಾಹನ ಕಾಯ್ದೆ - 2021 (ರಿಜಿಸ್ಟ್ರೇಷನ್ ಮತ್ತು ವಾಹನ ಚಾಲನಾ ಪರವಾನಗಿ ಸ್ಕ್ರಾಫ್ ಫೆಸಿಲಿಟಿ) ಜಾರಿಗೆ ತರುವ ಬಗ್ಗೆ ಕೇಂದ್ರ ಸರ್ಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ನಿಯಮವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಾಲಿನ್ಯ ಮತ್ತು ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಹಳೆಯ ವಾಹನಗಳನ್ನು ತೆರವುಗೊಳಿಸಲು ಹಳೆ ವಾಹನಗಳ ಗುಜರಿಗೆ ಹಾಕುವ ನೀತಿಯನ್ನು ಕಳೆದ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಈ ನಿಯಮದಡಿ ವಾಹನ ಮಾಲೀಕರು 15 ವರ್ಷಗಳ ನಂತರ ನೋಂದಣಿ ಮುಗಿದ ತಮ್ಮ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸಾಧ್ಯವಾಗುತ್ತದೆ. ದೆಹಲಿಯಲ್ಲಿ ಡೀಸೆಲ್ ವಾಹನಗಳಿಗೆ 10 ವರ್ಷಗಳ ನಂತರ ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷಗಳಿಗೆ ನೋಂದಣಿ ಕೊನೆಗೊಳ್ಳುವಂತೆ ನೀತಿ ಮಾಡಲಾಗಿದೆ. ಆಬಳಿಕ ವಾಹನ ಸಾಮರ್ಥ್ಯ ಅನುಸರಿಸಿ ಪರವಾನಗಿ ನವೀಕರಿಸುವುದಿದ್ದರೆ ಹಲವು ಪಟ್ಟು ಹೆಚ್ಚು ದಂಡ ಕಟ್ಟಬೇಕಾಗುತ್ತದೆ.
ಇದೇ ವೇಳೆ, ಸ್ಕ್ರ್ಯಾಪೇಜ್ ನೀತಿಯು ಹಳೆಯ ವಾಹನಗಳನ್ನು ತೆಗೆದುಹಾಕುವುದರ ಜೊತೆಗೆ ಹೊಸ ಆಟೋಮೊಬೈಲ್ ಉದ್ಯಮಕ್ಕೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. 2023ರ ಬಳಿಕ ಎಲ್ಲ ರೀತಿಯ ಭಾರೀ ವಾಣಿಜ್ಯ ವಾಹನಗಳು ಕಡ್ಡಾಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಇದೇ ನೀತಿಯು ಜೂನ್ 2024 ರಿಂದ ಖಾಸಗಿ ಮತ್ತು ಇತರ ವಾಹನಗಳಿಗೂ ಅನ್ವಯಿಸಲಿದೆ. ಆದರೆ ರಾಜ್ಯದಲ್ಲಿ ದೆಹಲಿಯ ನೀತಿಗಳೇ ಇರಲಿವೆಯಾ, ವಾಹನಗಳ ಪರವಾನಗಿ ಅವಧಿಯನ್ನು ಹೆಚ್ಚಿಸುತ್ತಾರಾ ಅನ್ನುವ ಬಗ್ಗೆ ರಾಜ್ಯ ಸರಕಾರ ಸ್ಪಷ್ಟ ಪಡಿಸಿಲ್ಲ.
Govt vehicle scrappage policy implements in Karnataka state
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm