ಬ್ರೇಕಿಂಗ್ ನ್ಯೂಸ್
07-08-22 09:19 pm HK News Desk ಕರ್ನಾಟಕ
ಹಾಸನ, ಆಗಸ್ಟ್ 7 : ಗಾಳಿ, ಮಳೆಗೆ ಬೃಹತ್ ಮರವೊಂದು ಬೈಕ್ ಮೇಲೆ ಬಿದ್ದಿದ್ದು ಸವಾರ ಸಹಾಯಕ್ಕಾಗಿ ಅಂಗಲಾಚಿ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ರಸ್ತೆಯ ಮಾಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲ್ಲಸೋಮನಹಳ್ಳಿ ಗ್ರಾಮದ ರಂಗಶೆಟ್ಟಿ (45) ಎಂದು ಗುರುತಿಸಲಾಗಿದೆ. ಅವರು ಚನ್ನರಾಯಪಟ್ಟಣದಿಂದ ಬೈಕ್ನಲ್ಲಿ ಕಲ್ಲಸೋಮನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಂಗಶೆಟ್ಟಿ ಅವರ ಬೈಕಿನ ಮೇಲೆ ಬಿದ್ದಿದೆ. ಬೈಕ್ ಹಾಗೂ ಮರದ ನಡುವೆ ಸಿಲುಕಿದ ರಂಗಶೆಟ್ಟಿ ಅರ್ಧ ಗಂಟೆಗೂ ಹೆಚ್ಚು ಕಾಲ ನರಳಾಡಿ ರಕ್ಷಿಸುವಂತೆ ಅಂಗಲಾಚಿದ್ದಾರೆ.
ಸ್ಥಳೀಯರು ಮರ ದೊಡ್ಡದಿದ್ದರಿಂದ ನೆರವು ನೀಡುವುದಕ್ಕಾಗದೇ ಅಸಹಾಯಕರಾಗಿದ್ದಾರೆ. ಬಳಿಕ ಜೆಸಿಬಿ ತರಿಸಿ ಮರವನ್ನು ಎತ್ತಿ ರಂಗಶೆಟ್ಟಿ ಅವರನ್ನು ಹೊರಕ್ಕೆಳೆದರೂ ರಕ್ಷಿಸಲು ಮಾತ್ರ ಸಾಧ್ಯವಾಗಿಲ್ಲ. ಅದಾಗಲೇ ರಕ್ತ ಕಾರಿ ರಂಗ ಶೆಟ್ಟಿ ಗಂಭೀರ ಸ್ಥಿತಿಗೆ ಒಳಗಾಗಿದ್ದರು. ಸ್ಥಳಕ್ಕೆ ಆಸ್ಪತ್ರೆಯ ಸಿಬ್ಬಂದಿ ಬಂದು ಪ್ರಥಮ ಚಿಕಿತ್ಸೆ ನೀಡಿದರೂ ಫಲ ನೀಡಲಿಲ್ಲ.
ಎರಡು ಜೆಸಿಬಿ, ಹಿಟಾಚಿ ಯಂತ್ರ ಬಳಸಿ ಅಗ್ನಿಶಾಮಕದಳದ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan heavy wind rains, huge tree falls on Man who was on his bike, suffers and dies on spot. The deceased has been identified as Rangashetty (40). A shocking video of this has gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm