ಬ್ರೇಕಿಂಗ್ ನ್ಯೂಸ್
08-08-22 07:21 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8 : ಮೊನ್ನೆಯಷ್ಟೇ ತಾಯಿಯೇ ಮಗುವನ್ನು ಮಹಡಿಯಿಂದ ತಳ್ಳಿ ಕೊಲೆಗೈದ ಭೀಭತ್ಸ ಘಟನೆ ನಡೆದಿತ್ತು. ಈಗ ವೃತ್ತಿಯಲ್ಲಿ ವೈದ್ಯೆಯಾಗಿದ್ದ ಮಹಿಳೆಯೊಬ್ಬರು ತನ್ನ ಹತ್ತು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ಬೆಳಕಿಗೆ ಬಂದಿದೆ.
ಸೈಮಾ ಮುತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ತನ್ನ 10 ವರ್ಷದ ಮಗಳು ಆರಾಧನಾಳನ್ನು ನೇಣಿಗೆ ಹಾಕಿಸಿ, ಹತ್ಯೆಗೈದ ಬಳಿಕ ಸೈಮಾ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪ್ರಸ್ತುತ ಪೊಲೀಸರು ಸೈಮಾ ಪತಿ ಕೋಲಾರ ಮೂಲದ ವೈದ್ಯ ನಾರಾಯಣ್ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಮೂಲದ ಸೈಮಾ ಮುತ್ತಪ್ಪ ಹತ್ತು ವರ್ಷಗಳ ಹಿಂದೆ ಪರಿಚಯ ಆಗಿದ್ದ ಕೋಲಾರ ಮೂಲದ ನಾರಾಯಣ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ಡೆಂಟಲ್ ಡಾಕ್ಟರ್ ಆಗಿದ್ದರು. ನಾರಾಯಣ್ ಮತ್ತು ಸೈಮಾ ಇಬ್ಬರೂ ಸೇರಿ ಬೆಂಗಳೂರಿನಲ್ಲಿ ಒಟ್ಟಿಗೆ ಕ್ಲಿನಿಕ್ ನಡೆಸುತ್ತಿದ್ದರು. ಎರಡು ದಿನಗಳ ಹಿಂದೆ ನಾರಾಯಣ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಪತಿ ನಾರಾಯಣ್ ಮನೆಗೆ ಬಂದು ನೋಡಿದಾಗಲೇ ಕೃತ್ಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ವಿಷಯ ತಿಳಿದ ತಕ್ಷಣ ಆಸ್ಟ್ರೇಲಿಯಾದಲ್ಲಿದ್ದ ಸೈಮಾ ಸಹೋದರ ಬೆಂಗಳೂರಿಗೆ ಬಂದಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶೈಮಾ ಕೊಡಗಿನ ಗೌಡ್ತಿಯಾಗಿದ್ದು ಈಕೆ ಪ್ರೀತಿಸಿ ಬೇರೊಬ್ಬರನ್ನು ಮದುವೆಯಾಗುವುದು ಮನೆಯವರಿಗೆ ಇಷ್ಟವಿರಲಿಲ್ಲ. ಆದರೆ, ಮನೆಯವರನ್ನು ಒಪ್ಪಿಸಿ ಆಕೆಯೇ ಮುಂದೆ ನಿಂತು ಮದುವೆಯಾಗಿದ್ದಳು. ಇವರ ದಾಂಪತ್ಯಕ್ಕೆ ಹೆಣ್ಣು ಮಗುವಾಗಿದ್ದು ಬೆಳೆದು ನಿಂತಿದ್ದಳು. ಸಾವಿನ ಬಗ್ಗೆ ಭಾರೀ ಅನುಮಾನಗಳಿದ್ದು ತಾಯಿಯೇ ಹತ್ತು ವರ್ಷದ ಮಗಳನ್ನು ಸಾಯಿಸಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಪೊಲೀಸರು ಗಂಡನನ್ನು ಗುರಿಯಾಗಿಸಿ ತನಿಖೆ ನಡೆಸುತ್ತಿದ್ದಾರೆ.
Dentist from Kodagu commits suicide by killing her 10 year old daughter in Bangalore. The deceased has been identified as Saima Muttappa and her daughter Aradana. It is said she had married the person whom she loved. The reason for their suicide is still not known.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm