ಬ್ರೇಕಿಂಗ್ ನ್ಯೂಸ್
08-08-22 07:21 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8 : ಮೊನ್ನೆಯಷ್ಟೇ ತಾಯಿಯೇ ಮಗುವನ್ನು ಮಹಡಿಯಿಂದ ತಳ್ಳಿ ಕೊಲೆಗೈದ ಭೀಭತ್ಸ ಘಟನೆ ನಡೆದಿತ್ತು. ಈಗ ವೃತ್ತಿಯಲ್ಲಿ ವೈದ್ಯೆಯಾಗಿದ್ದ ಮಹಿಳೆಯೊಬ್ಬರು ತನ್ನ ಹತ್ತು ವರ್ಷದ ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ಬೆಳಕಿಗೆ ಬಂದಿದೆ.
ಸೈಮಾ ಮುತ್ತಪ್ಪ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ತನ್ನ 10 ವರ್ಷದ ಮಗಳು ಆರಾಧನಾಳನ್ನು ನೇಣಿಗೆ ಹಾಕಿಸಿ, ಹತ್ಯೆಗೈದ ಬಳಿಕ ಸೈಮಾ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಪ್ರಸ್ತುತ ಪೊಲೀಸರು ಸೈಮಾ ಪತಿ ಕೋಲಾರ ಮೂಲದ ವೈದ್ಯ ನಾರಾಯಣ್ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಮೂಲದ ಸೈಮಾ ಮುತ್ತಪ್ಪ ಹತ್ತು ವರ್ಷಗಳ ಹಿಂದೆ ಪರಿಚಯ ಆಗಿದ್ದ ಕೋಲಾರ ಮೂಲದ ನಾರಾಯಣ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರೂ ಡೆಂಟಲ್ ಡಾಕ್ಟರ್ ಆಗಿದ್ದರು. ನಾರಾಯಣ್ ಮತ್ತು ಸೈಮಾ ಇಬ್ಬರೂ ಸೇರಿ ಬೆಂಗಳೂರಿನಲ್ಲಿ ಒಟ್ಟಿಗೆ ಕ್ಲಿನಿಕ್ ನಡೆಸುತ್ತಿದ್ದರು. ಎರಡು ದಿನಗಳ ಹಿಂದೆ ನಾರಾಯಣ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭಾನುವಾರ ಪತಿ ನಾರಾಯಣ್ ಮನೆಗೆ ಬಂದು ನೋಡಿದಾಗಲೇ ಕೃತ್ಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ವಿಷಯ ತಿಳಿದ ತಕ್ಷಣ ಆಸ್ಟ್ರೇಲಿಯಾದಲ್ಲಿದ್ದ ಸೈಮಾ ಸಹೋದರ ಬೆಂಗಳೂರಿಗೆ ಬಂದಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶೈಮಾ ಕೊಡಗಿನ ಗೌಡ್ತಿಯಾಗಿದ್ದು ಈಕೆ ಪ್ರೀತಿಸಿ ಬೇರೊಬ್ಬರನ್ನು ಮದುವೆಯಾಗುವುದು ಮನೆಯವರಿಗೆ ಇಷ್ಟವಿರಲಿಲ್ಲ. ಆದರೆ, ಮನೆಯವರನ್ನು ಒಪ್ಪಿಸಿ ಆಕೆಯೇ ಮುಂದೆ ನಿಂತು ಮದುವೆಯಾಗಿದ್ದಳು. ಇವರ ದಾಂಪತ್ಯಕ್ಕೆ ಹೆಣ್ಣು ಮಗುವಾಗಿದ್ದು ಬೆಳೆದು ನಿಂತಿದ್ದಳು. ಸಾವಿನ ಬಗ್ಗೆ ಭಾರೀ ಅನುಮಾನಗಳಿದ್ದು ತಾಯಿಯೇ ಹತ್ತು ವರ್ಷದ ಮಗಳನ್ನು ಸಾಯಿಸಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಪೊಲೀಸರು ಗಂಡನನ್ನು ಗುರಿಯಾಗಿಸಿ ತನಿಖೆ ನಡೆಸುತ್ತಿದ್ದಾರೆ.
Dentist from Kodagu commits suicide by killing her 10 year old daughter in Bangalore. The deceased has been identified as Saima Muttappa and her daughter Aradana. It is said she had married the person whom she loved. The reason for their suicide is still not known.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm