ಬ್ರೇಕಿಂಗ್ ನ್ಯೂಸ್
08-08-22 09:58 pm HK News Desk ಕರ್ನಾಟಕ
ಧಾರವಾಡ, ಆಗಸ್ಟ್ 8 : ಶಾಸಕ ಜಮೀರ್ ಅಹ್ಮದ್ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲ್ಲ ಎಂಬ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗರಂ ಆಗಿದ್ದಾರೆ. ಇದು ಖಂಡನೀಯ, ಇದನ್ನ ವಿರೋಧಿಸುತ್ತೇನೆ. ಇದು ನಿಮ್ಮ ಆಸ್ತಿನೂ ಅಲ್ಲ, ನಿಮ್ಮ ಪಿತ್ರಾರ್ಜಿತ ಆಸ್ತಿಯೂ ಅಲ್ಲ ಎಂದಿದ್ದಾರೆ.
ವಕ್ಫ್ ಬೋರ್ಡಿನದ್ದೂ ಅಲ್ಲ, ಮುಸ್ಲಿಮರದೂ ಅಲ್ಲ, ಇದು ಹಿಂದೂಗಳದ್ದು ಅಲ್ಲ. ಸರ್ಕಾರದ ಜಾಗ ಅದು. ಸರ್ಕಾರಿ ಜಾಗದಲ್ಲಿ ನೀವು ನಮಾಜ್ ಮಾಡುತ್ತಾ ಬಂದಿದ್ದೀರಿ.. ವಿಧಿ ವಿಧಾನದ ಮೂಲಕ ವರ್ಷಕ್ಕೆ ಎರಡು ಬಾರಿ ನಮಾಜ್ ಮಾಡುತ್ತಾ ಬಂದಿದ್ದೀರಿ. ಹಾಗಾದ್ರೆ ಗಣೇಶೋತ್ಸವಕ್ಕೆ ನಿಮ್ಮ ವಿರೋಧ ಯಾಕೆ ? ನೀವು ಕೇವಲ ಮುಸ್ಲಿಂ ಓಟಿನ ಮೇಲೆ ಗೆದ್ದಿಲ್ಲ. ನೀವು ಮುಸ್ಲಿಮರಿಂದ ಮಾತ್ರ ಗೆದ್ದಿಲ್ಲ, ಮುಸ್ಲಿಂ ಎಂಎಲ್ಎ ಅಲ್ಲ. ನೀವು ಚಾಮರಾಜಪೇಟೆ ಶಾಸಕ, ನಿಮಗೆ ಹಿಂದೂಗಳು ಓಟು ಹಾಕಿದ್ದಾರೆ, ನೆನೆಪಿಟ್ಟುಕೊಳ್ಳಿ.

ಇನ್ನೊಮ್ಮೆ ನಿಮ್ಮಿಂದ ಇಂತಹ ಹೇಳಿಕೆ ಬರಬಾರದು. ಅದನ್ನ ನೀವು ವಾಪಾಸ್ ಪಡೆಯಬೇಕು, ಹಿಂದೂಗಳಿಗೆ ಕ್ಷಮೆ ಕೇಳಬೇಕು. ಅದೇ ಮೈದಾನದಲ್ಲಿ ನಾವು ಗಣೇಶೋತ್ಸವ ಆಚರಣೆ ಮಾಡ್ತೀವಿ. ತಾಕತ್ತಿದ್ದರೆ ಅದನ್ನ ವಿರೋಧ ಮಾಡಿ. ಈ ರೀತಿಯ ಹೇಳಿಕೆಯಿಂದ ಅಶಾಂತಿ ಮತ್ತು ಗಲಭೆ ಸೃಷ್ಟಿ ಮಾಡ್ತಿದ್ದೀರಿ. ಹಿಂದೂಗಳಿಗೆ ಈ ಮೂಲಕ ಹೇಳ್ತೀನಿ. ನೀವೇನಾದರೂ ಮುಂದೆ ಜಮೀರ್ ಗೆ ಮತ ಹಾಕಿದ್ರೆ, ಗಣೇಶನ ವಿರುದ್ಧವಾಗಿ ನಡೆದುಕೊಂಡ ಹಾಗೆ. ಅವರ ಸೊಕ್ಕನ್ನ ಮುರಿಯಬೇಕು ಅಂದ್ರೆ ಮುಂಬರುವ ಚುನಾವಣೆಯಲ್ಲಿ ಸೋಲಿಸಬೇಕು. ವಿಜೃಂಭಣೆಯಿಂದ ಅಲ್ಲಿ ನಾವು ಮತ್ತು ಹಿಂದುಗಳೆಲ್ಲ ಸೇರಿ ಗಣೇಶೋತ್ಸವ ಮಾಡ್ತಾರೆ.
ರಾಷ್ಟ್ರ ಧ್ವಜ ಹಾರಿಸೋ ಮಾತಿಗೆ ನಾವು ಸಹ ಬರ್ತೀವಿ. ಎಲ್ಲಾ ಜನರು ಅದಕ್ಕೆ ಬರ್ತಾರೆ. ಅದು ಕೇವಲ 75 ರ ಸಂಭ್ರಮಾಚರಣೆಗೆ ಮಾತ್ರ ಆಗಿರುವುದಲ್ಲ. ಪ್ರತಿ ಜನವರಿ 26 ಹಾಗೂ ಆಗಸ್ಟ್ 15 ರಂದು ಧ್ವಜ ಹಾರಬೇಕು. ಧ್ವಜ ಹಾರಿಸುವ ವಿಚಾರದಲ್ಲಿ ನಾವು ನಿಮ್ಮ ಜೊತೆ ಇದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.
Idgah Maidan row we wont allow anyone to touch the property Pramod Muthalik. Amid controversy over the ownership of 'Idgah Maidan' in the heart of the city, the Karnataka Revenue Minister R Ashoka said the land belongs to the Revenue Department and it will decide on its usage. Seeking to end the controversy over Wakf Board claiming right over the ‘Idgah Maidan’ at Chamarajpet, the Minister said the department will decide how it should be used.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm