ಬ್ರೇಕಿಂಗ್ ನ್ಯೂಸ್
08-08-22 09:58 pm HK News Desk ಕರ್ನಾಟಕ
ಧಾರವಾಡ, ಆಗಸ್ಟ್ 8 : ಶಾಸಕ ಜಮೀರ್ ಅಹ್ಮದ್ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲ್ಲ ಎಂಬ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗರಂ ಆಗಿದ್ದಾರೆ. ಇದು ಖಂಡನೀಯ, ಇದನ್ನ ವಿರೋಧಿಸುತ್ತೇನೆ. ಇದು ನಿಮ್ಮ ಆಸ್ತಿನೂ ಅಲ್ಲ, ನಿಮ್ಮ ಪಿತ್ರಾರ್ಜಿತ ಆಸ್ತಿಯೂ ಅಲ್ಲ ಎಂದಿದ್ದಾರೆ.
ವಕ್ಫ್ ಬೋರ್ಡಿನದ್ದೂ ಅಲ್ಲ, ಮುಸ್ಲಿಮರದೂ ಅಲ್ಲ, ಇದು ಹಿಂದೂಗಳದ್ದು ಅಲ್ಲ. ಸರ್ಕಾರದ ಜಾಗ ಅದು. ಸರ್ಕಾರಿ ಜಾಗದಲ್ಲಿ ನೀವು ನಮಾಜ್ ಮಾಡುತ್ತಾ ಬಂದಿದ್ದೀರಿ.. ವಿಧಿ ವಿಧಾನದ ಮೂಲಕ ವರ್ಷಕ್ಕೆ ಎರಡು ಬಾರಿ ನಮಾಜ್ ಮಾಡುತ್ತಾ ಬಂದಿದ್ದೀರಿ. ಹಾಗಾದ್ರೆ ಗಣೇಶೋತ್ಸವಕ್ಕೆ ನಿಮ್ಮ ವಿರೋಧ ಯಾಕೆ ? ನೀವು ಕೇವಲ ಮುಸ್ಲಿಂ ಓಟಿನ ಮೇಲೆ ಗೆದ್ದಿಲ್ಲ. ನೀವು ಮುಸ್ಲಿಮರಿಂದ ಮಾತ್ರ ಗೆದ್ದಿಲ್ಲ, ಮುಸ್ಲಿಂ ಎಂಎಲ್ಎ ಅಲ್ಲ. ನೀವು ಚಾಮರಾಜಪೇಟೆ ಶಾಸಕ, ನಿಮಗೆ ಹಿಂದೂಗಳು ಓಟು ಹಾಕಿದ್ದಾರೆ, ನೆನೆಪಿಟ್ಟುಕೊಳ್ಳಿ.

ಇನ್ನೊಮ್ಮೆ ನಿಮ್ಮಿಂದ ಇಂತಹ ಹೇಳಿಕೆ ಬರಬಾರದು. ಅದನ್ನ ನೀವು ವಾಪಾಸ್ ಪಡೆಯಬೇಕು, ಹಿಂದೂಗಳಿಗೆ ಕ್ಷಮೆ ಕೇಳಬೇಕು. ಅದೇ ಮೈದಾನದಲ್ಲಿ ನಾವು ಗಣೇಶೋತ್ಸವ ಆಚರಣೆ ಮಾಡ್ತೀವಿ. ತಾಕತ್ತಿದ್ದರೆ ಅದನ್ನ ವಿರೋಧ ಮಾಡಿ. ಈ ರೀತಿಯ ಹೇಳಿಕೆಯಿಂದ ಅಶಾಂತಿ ಮತ್ತು ಗಲಭೆ ಸೃಷ್ಟಿ ಮಾಡ್ತಿದ್ದೀರಿ. ಹಿಂದೂಗಳಿಗೆ ಈ ಮೂಲಕ ಹೇಳ್ತೀನಿ. ನೀವೇನಾದರೂ ಮುಂದೆ ಜಮೀರ್ ಗೆ ಮತ ಹಾಕಿದ್ರೆ, ಗಣೇಶನ ವಿರುದ್ಧವಾಗಿ ನಡೆದುಕೊಂಡ ಹಾಗೆ. ಅವರ ಸೊಕ್ಕನ್ನ ಮುರಿಯಬೇಕು ಅಂದ್ರೆ ಮುಂಬರುವ ಚುನಾವಣೆಯಲ್ಲಿ ಸೋಲಿಸಬೇಕು. ವಿಜೃಂಭಣೆಯಿಂದ ಅಲ್ಲಿ ನಾವು ಮತ್ತು ಹಿಂದುಗಳೆಲ್ಲ ಸೇರಿ ಗಣೇಶೋತ್ಸವ ಮಾಡ್ತಾರೆ.
ರಾಷ್ಟ್ರ ಧ್ವಜ ಹಾರಿಸೋ ಮಾತಿಗೆ ನಾವು ಸಹ ಬರ್ತೀವಿ. ಎಲ್ಲಾ ಜನರು ಅದಕ್ಕೆ ಬರ್ತಾರೆ. ಅದು ಕೇವಲ 75 ರ ಸಂಭ್ರಮಾಚರಣೆಗೆ ಮಾತ್ರ ಆಗಿರುವುದಲ್ಲ. ಪ್ರತಿ ಜನವರಿ 26 ಹಾಗೂ ಆಗಸ್ಟ್ 15 ರಂದು ಧ್ವಜ ಹಾರಬೇಕು. ಧ್ವಜ ಹಾರಿಸುವ ವಿಚಾರದಲ್ಲಿ ನಾವು ನಿಮ್ಮ ಜೊತೆ ಇದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.
Idgah Maidan row we wont allow anyone to touch the property Pramod Muthalik. Amid controversy over the ownership of 'Idgah Maidan' in the heart of the city, the Karnataka Revenue Minister R Ashoka said the land belongs to the Revenue Department and it will decide on its usage. Seeking to end the controversy over Wakf Board claiming right over the ‘Idgah Maidan’ at Chamarajpet, the Minister said the department will decide how it should be used.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm