ಬ್ರೇಕಿಂಗ್ ನ್ಯೂಸ್
12-08-22 11:45 am Bengalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 12: ಕೋಡಗನ ಕೋಳಿ ನುಂಗಿತ್ತಾ.. ಕಾಡು ಕುದುರೆ ಓಡಿ ಬಂದಿತ್ತಾ.. ಇತ್ಯಾದಿ ಶಿಶುನಾಳ ಶರೀಫರ ಪ್ರಸಿದ್ಧ ತತ್ವಪದಗಳನ್ನು ಹಾಡಿ ಜನಮಾನಸದಲ್ಲಿ ಖ್ಯಾತಿ ಗಳಿಸಿದ್ದ ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಇದ್ದುದರಿಂದ ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತ ಆಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಆಯಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗಲೇ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಸುಬ್ಬಣ್ಣ ಅವರ ಮೂಲ ಹೆಸರು ಜಿ.ಸುಬ್ರಹ್ಮಣ್ಯಂ. ಗಣೇಶ್ ರಾವ್ ಹಾಗೂ ರಂಗನಾಯಕಮ್ಮ ಅವರ ಮಗನಾದ ಸುಬ್ಬಣ್ಣ ಶಿವಮೊಗ್ಗ ನಗರದಲ್ಲಿ 1938ರಲ್ಲಿ ಜನಿಸಿದರು. ಬಿ.ಎ., ಬಿ.ಕಾಂ., ಎಲ್.ಎಲ್.ಬಿ. ಪದವಿ ಪಡೆದಿದ್ದ ಅವರು ವಕೀಲರಾಗಿ ವೃತ್ತಿ ಬದುಕು ಆರಂಭಿಸಿದ್ದರು. ಬಳಿಕ ನೋಟರಿಯಾಗಿಯೂ ಕೆಲಸ ಮಾಡಿದ್ದರು. ಶಾಲಾ ದಿನಗಳಲ್ಲಿಯೇ ಹಾಡುವುದನ್ನು ರೂಢಿ ಮಾಡಿಕೊಂಡಿದ್ದ ಸುಬ್ಬಣ್ಣ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದರು. ಆನಂತರ, ವಕೀಲಿ ವೃತ್ತಿಯನ್ನೇ ಬಿಟ್ಟು ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸುಬ್ಬಣ್ಣ 1963ರಲ್ಲಿ ಆಕಾಶವಾಣಿ ಗಾಯಕರಾಗಿ ಸೇರಿದ್ದರು. ಬಳಿಕ ಹಿನ್ನೆಲೆ ಗಾಯಕರಾಗಿ ಸಿನಿಮಾ ರಂಗಕ್ಕೂ ಸುಬ್ಬಣ್ಣ ಖ್ಯಾತಿ ಗಳಿಸಿದ್ದರು.
ಸುಗಮ ಸಂಗೀತದ ಸಾಧನೆಗಾಗಿ 1979ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ್ದರು. ಆಕಾಶವಾಣಿ ಪ್ರಸಾರ ಮಾಡಿದ ಜನಪ್ರಿಯ ಕಾರ್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾಗಿದ್ದರು. ಸುಬ್ಬಣ್ಣ ಅವರ ಸಾಧನೆಯನ್ನು ಮನ್ನಿಸಿ ರಾಜ್ಯ ಸರ್ಕಾರ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ಅಕಾಡೆಮಿಯ ಕರ್ನಾಟಕ ಕಲಾ ತಿಲಕ ಪ್ರಶಸ್ತಿ ನೀಡಿ ಗೌರವಿಸಿದರೆ, ಅಭಿಮಾನಿಗಳು ನೂರಾರು ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದ್ದಾರೆ.
Noted Kannada singer Shivamogga Subbanna passed away following a heart attack at a hospital here on Thursday night, sources close to the family said.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm