ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.





ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm