ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.





ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am