ಬ್ರೇಕಿಂಗ್ ನ್ಯೂಸ್
13-08-22 04:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13 : ಉದ್ಯಮಿಯೊಬ್ಬರಿಗೆ ಯುವತಿ ಹೆಸರಲ್ಲಿ ಮೆಸೇಜ್ ಮಾಡಿ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ.
ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್, ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಯುವತಿ ಹೆಸರಲ್ಲಿ ಚಾಟ್ ಮಾಡಿದ್ದ. ಉದ್ಯಮಿಗೆ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದು ಸಲುಗೆ ತೋರಿಸುವ ರೀತಿ ಮೆಸೇಜ್ ಮಾಡುತ್ತಿದ್ದ. ಎರಡೂ ಕಡೆಯಿಂದ ಸಂದೇಶ ವಿನಿಮಯ ಆದಬಳಿಕ ಕ್ರೈಮ್ ಪೊಲೀಸ್ ಎಂದು ಸ್ವತಃ ಯುವರಾಜನೇ ಸಂಪರ್ಕ ಮಾಡಿದ್ದ. ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಹೇಳಿ ಬೆದರಿಸಿದ್ದ. ಆನಂತರ ಈ ಬಗ್ಗೆ ಕೇಸು ಮುಂದುವರೆಸದಿರಲು ಹಣ ಕೇಳಿದ್ದ.


ಮೊದಲಿಗೆ ಐವತ್ತು ಸಾವಿರ ರೂ. ನಂತ್ರ ಬ್ಯಾಂಕ್ ನಲ್ಲಿ ಮೂರು ಲಕ್ಷ ರೂ. ಡ್ರಾ ಮಾಡಿಸಿ ಹಣ ಪಡೆದಿದ್ದ. ಆಬಳಿಕ ಹಂತ ಹಂತವಾಗಿ ಒಟ್ಟು ಹದಿನಾಲ್ಕು ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ್ದಾನೆ. ಹಲಸೂರು ಗೇಟ್ ಬಳಿಯೂ ಒಮ್ಮೆ ಹಣ ಪಡೆದಿದ್ದ ಎಂದು ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ. ಈ ನಡುವೆ, ಉದ್ಯಮಿಗೆ ಡೌಟ್ ಬಂದು ಪೊಲೀಸ್ ಠಾಣೆ ಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Karnataka police have arrested an upcoming Kannada actor for his alleged involvement in honey-trapping a 73-year-old industrialist and extorting money from him, police said on Saturday. The arrested actor has been identified as Yuvaraj a.k.a Yuva, a resident of J P Nagar in Bengaluru. Two strangers and as many friends of his — Kavana and Nidhi — have also been booked.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm