ಬ್ರೇಕಿಂಗ್ ನ್ಯೂಸ್
13-08-22 09:59 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದಲ್ಲಿ ಸುಮಾರು 1.20 ಕೋಟಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಸರ್ಕಾರದಿಂದ ಈಗಾಗಲೇ 1.08 ಕೋಟಿ ಧ್ವಜಗಳನ್ನು ವಿತರಿಸಲಾಗಿದೆ. ಇದಲ್ಲದೆ, ಸಂಘ ಸಂಸ್ಥೆಗಳೂ ಸಹ ಕೈ ಜೋಡಿಸಿದ್ದು ಮೂರು ದಿನಗಳ ಅಭಿಯಾನದಲ್ಲಿ 1.20 ಕೋಟಿ ರಾಷ್ಟ್ರಧ್ವಜಗಳು ಹಾರಾಡುತ್ತವೆ ಎಂದು ಹೇಳಿದರು.

ಹರ್ ಘರ್ ತಿರಂಗಾ ಪ್ರತಿ ಹಳ್ಳಿಯಲ್ಲೂ ವಿಸ್ತಾರಗೊಂಡಿದೆ. ಜನರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜಗಳನ್ನು ಹಾಕುತ್ತಿದ್ದಾರೆ. ವಾಸ್ತವವಾಗಿ ಅಭಿಯಾನ ಇಂದಿನಿಂದ ಆಂಭವಾಗುತ್ತಿದ್ದರೂ ಸಹ ಕಳೆದ ಎರಡು ದಿನಗಳಿಂದಲೇ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿದೆ. ಶಾಲಾ ಮಕ್ಕಳು ಎಲ್ಲಾ ಕಡೆ ಪಥಸಂಚಲನ ನಡೆಸಿ ಧ್ವಜದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿವೆ. ಅಮೃತ ಮಹೋತ್ಸವ ನೆನಪಿಗೆ ದೇಶದ ಎಲ್ಲಾ ಜನರಿಂದಲೂ ಧ್ವಜ ಹಾರಿಸುವ ಅಭಿಯಾನ ನಡೆಸುವ ಮೂಲಕ ನಾವೆಲ್ಲರೂ ಒಂದು, ನಾವೆಲ್ಲರೂ ದೇಶಭಕ್ತರು ಎಂದು ಸಾರಲಾಗುತ್ತದೆ. ಅಲ್ಲದೆ, ಮುಂದಿನ 25 ವರ್ಷ ಭಾರತದ ಭವ್ಯ ಭವಿಷ್ಯಕ್ಕೆ ಸಂಕಲ್ಪ ಮಾಡಲಾಗುತ್ತದೆ. ಜಾತಿ, ಮತ, ಭೇದ ಬಿಟ್ಟು ಭಾರತವನ್ನು ಶಕ್ತಿಶಾಲಿಯಾಗಿ ರೂಪಿಸಲು ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
Chief Minister Basavaraj Bommai has said that the national flag will be hoisted over 1.20 crore houses in the state as part of the Amrit Mahotsav on 75th Independence day.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm