ಬ್ರೇಕಿಂಗ್ ನ್ಯೂಸ್
16-08-22 12:58 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕರ್ನಾಟಕದಲ್ಲಿ ಹಿಂದೂ ಸಮಾಜ ಮೇಲೆದ್ದರೆ ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಮತ್ತು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಶಿವಮೊಗ್ಗದ ಬೆಳವಣಿಗೆಗಳನ್ನು ವಿವರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ನಾನು ಎಲ್ಲ ಮುಸ್ಲಿಮರೂ ಗೂಂಡಾಗಳು ಎಂದು ಹೇಳುವುದಿಲ್ಲ. ಆದರೆ ಯಾರೋ ನಾಲ್ಕೈದು ದುಷ್ಕರ್ಮಿಗಳು ಮಾಡುತ್ತಿರುವ ಕೆಲಸವನ್ನು ಸಮಾಜ ಖಂಡಿಸಬೇಕಿತ್ತು. ಆ ಕೆಲಸವನ್ನು ಮುಸ್ಲಿಂ ಸಮಾಜದ ಪ್ರಮುಖರು ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಪಕ್ಷಗಳು ಹಿಂದೂ-ಮುಸ್ಲಿಂ ಗಲಭೆ ತಂದು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿವೆ. ಇದು ಎಂದಿಗೂ ಈಡೇರುವುದಿಲ್ಲ. ಶಿವಮೊಗ್ಗದಲ್ಲಿ ಸ್ಥಳೀಯ ಹಿಂದೂ-ಮುಸ್ಲಿಮರು ಅಣ್ಣತಮ್ಮಂದಿರಂತೆ ಬಾಳುತ್ತಿದ್ದಾರೆ. ಆದರೆ ಕೇರಳ ಮತ್ತು ಇತರ ರಾಜ್ಯಗಳಿಂದ ಬರುವ ಎಸ್ಡಿಪಿಐ ಮತ್ತು ಇತರ ಸಂಘಟನೆಗಳ ಕಾರ್ಯಕರ್ತರು ಗಲಭೆ ಹಬ್ಬಿಸಲು ಯತ್ನಿಸುತ್ತಿದ್ದಾರೆ. ಇದು ಎಂದಿಗೂ ಯಶಸ್ವಿಯಾಗುವುದಿಲ್ಲ. ಶಿವಮೊಗ್ಗ ಗಲಭೆಗೆ ಕಾಂಗ್ರೆಸ್ ಕಾರ್ಪೊರೇಟರ್ ಗಂಡನೇ ಕಾರಣ. ಬಿಜೆಪಿ ಮೇಲೆ ಅರೋಪ ಮಾಡುವ ಮೊದಲು ಕಾಂಗ್ರೆಸ್ ಪಕ್ಷ ಇಂಥವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ ನಗರದಲ್ಲಿ ಸರ್ಕಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವೂ ಯಶಸ್ವಿಯಾಗಿತ್ತು. ನಂತರ ನಡೆದ ಬಿಜೆಪಿಯ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿಯೂ ಸಾಕಷ್ಟು ಜನರು ಸೇರಿದ್ದರು. ಕಾರ್ಯಕ್ರಮ ಮುಗಿದ ಮೇಲೆ ಎಲ್ಲರೂ ಮನೆಗಳಿಗೆ ಹೋದೆವು. ಅಷ್ಟರೊಳಗೆ ಕೆಲ ಕಿಡಿಗೇಡಿಗಳು ಸಾರ್ವಕರ್ ಪೋಟೊ ಹರಿದು ಹಾಕಿದ್ದರು. ಎಸ್ಡಿಪಿಐ ಕಾರ್ಯಕರ್ತರ ಈ ಕೃತ್ಯದಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನೆಲೆಗೊಂಡಿತು ಎಂದು ಹೇಳಿದರು.

ಶಿವಮೊಗ್ಗದ ಗಾಂಧಿಬಜಾರ್ನಲ್ಲಿ ಪ್ರೇಮಸಿಂಗ್ ಹಾಗೂ ಶರವಣ ಹೋಗುತ್ತಿರುವಾಗ ಸುಮಾರು ಆರು ಮಂದಿ ಮುಸ್ಲಿಂ ಗುಂಡಾಗಳು ಪ್ರೇಮ್ ಸಿಂಸ್ಗೆ ಚಾಕು ಹಾಕಿದರು. ಅವರ ನರಗಳು ಘಾಸಿಯಾಗಿರುವುದರಿಂದ ಉಳಿಯುವುದು ಕಷ್ಟ ಎನ್ನುತ್ತಿದ್ದಾರೆ. ಪೊಲೀಸರು ಬಹಳ ಶ್ರಮದಿಂದ ಅಪರಾಧಿಗಳನ್ನು ಹುಡುಕುತ್ತಿದ್ದಾರೆ. ಈ ವೇಳೆ ಒಬ್ಬನ ಮೇಲೆ ಗುಂಡು ಹಾರಿಸಿ, ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ ಎಂದು ವಿವರಿಸಿದರು.
KS Eshwarappa, BJP MLA from Karnataka, on Tuesday warned the Muslims to take action against youth of the community involved in anti-national activities in Shivamogga. He further said that the activities won't survive if the Hindu society rises. The lawmaker's statement came a day after a 20-year-old man, Prem Singh, was stabbed when clashes broke out between two communities in the town over putting up banners of Hindutva ideologue Veer Savarkar and 18th century Mysuru ruler Tipu Sultan on Independence Day (15 August, 2022).
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm