ಬ್ರೇಕಿಂಗ್ ನ್ಯೂಸ್
16-08-22 03:32 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ದೇಶಾದ್ಯಂತ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮದ ನಡುವಲ್ಲೇ ಬೆಂಗಳೂರಿನಲ್ಲಿ ಕೆಲವು ಕಿಡಿಗೇಡಿಗಳು ಸೇರಿಕೊಂಡು ಕ್ಲಬ್ ಹೌಸ್ ನಲ್ಲಿ ಪಾಕಿಸ್ಥಾನದ ಪರವಾಗಿ ಘೋಷಣೆ ಹಾಕಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ಟೆಕ್ಕಿಗಳು ಸೇರಿದಂತೆ ವಿವಿಧ ಕಡೆಯ ಯುವಕ- ಯುವತಿಯರಿದ್ದ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕಿಸ್ಥಾನದ ಧ್ವಜವನ್ನು ತಮ್ಮ ಡಿಪಿಗೆ ಹಾಕ್ಕೊಂಡಿದ್ದಲ್ಲದೆ, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್, ಇಂಡಿಯಾ ಮುರ್ದಾಬಾದ್ ಎಂಬ ಟ್ಯಾಗ್ ಲೈನನ್ನೂ ಹಾಕ್ಕೊಂಡಿದ್ದರು. ಕನ್ನಡದಲ್ಲೇ ಮಾತನಾಡುತ್ತಿದ್ದ ಯುವಕರು ಪಾಕಿಸ್ಥಾನದ ಧ್ವಜವುಳ್ಳ ಡಿಪಿಗಳನ್ನು ಹಾಕ್ಕೊಳ್ಳುವಂತೆ ಗ್ರೂಪಿನಲ್ಲಿದ್ದವರಿಗೆ ಪ್ರಚೋದಿಸುತ್ತಿದ್ದರು. ಕನ್ನಡದಲ್ಲಿಯೇ ಅಶ್ಲೀಲವಾಗಿ ಮಾತನಾಡಿಕೊಂಡು ಕೆಲವರು ವಿಕೃತಿ ಮೆರೆದಿದ್ದಾರೆ.


ಆಗಸ್ಟ್ 14ರ ಮಧ್ಯರಾತ್ರಿ ಕ್ಲಬ್ ಹೌಸ್ ಚರ್ಚೆ ನಡೆದಿದ್ದು, ಗ್ರೂಪಿನಲ್ಲಿದ್ದ ಹತ್ತಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ತಮ್ಮ ಡಿಪಿಯನ್ನಾಗಿ ಹಾಕ್ಕೊಂಡಿದ್ದರು. ರಿಕಿ, ಸೌರವ್, ರೊಲೆಕ್ಸ್, ಸೂರಜ್, ಸ್ನೂಪ್ ಎಂದು ಕೆಲವರ ಖಾತೆಯಲ್ಲಿ ಹೆಸರುಗಳಿದ್ದವು. ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಪಾಕಿಸ್ತಾನದ ಪರವಾಗಿ ಜಯಕಾರ ಹಾಕಿದ್ದಾರೆ. ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಯಾಗಿರುವ ಸೌರಭ್ ಎಂಬಾತ ಕೃತ್ಯದಲ್ಲಿ ಭಾಗಿಯಾಗಿದ್ದಾನೆಂದು ಆರೋಪ ಕೇಳಿಬಂದಿದೆ. ಇದನ್ನು ಗಮನಿಸಿದ ಯುವತಿಯೊಬ್ಬಳು ಕ್ಲಬ್ ಹೌಸ್ ಚರ್ಚೆಯ ಸ್ಕ್ರೀನ್ ಶಾಟ್ ತೆಗೆದು ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
Pro Pakistan slogans heard from techies during independence day on Club house in Bangalore. Manayata Tech Park techie Sowrabh has shouted pro pak slogans later a girl in the group shared it on social media.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm