ಬ್ರೇಕಿಂಗ್ ನ್ಯೂಸ್
16-08-22 05:37 pm HK News Desk ಕರ್ನಾಟಕ
ರಾಯಚೂರು, ಆಗಸ್ಟ್ 16: ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ಈಚರ್ ವಾಹನ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸವರಾಜ್ ಮಾಸಳಿ(40), ಬಸವರಾಜ್ರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಮೃತ ದುರ್ದೈವಿಗಳು.
ಮೃತರೆಲ್ಲರೂ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳು. ಸಂಬಂಧಿಕರೊಬ್ಬರು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಈ ಮೂವರು ಒಂದೇ ಬೈಕ್ನಲ್ಲಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದರು. ಮಾರ್ಗಮಧ್ಯೆ ಈಚರ್ ಲಾರಿ ರೂಪದಲ್ಲಿ ಬಂದ ಜವರಾಯ ಮೂವರ ಪ್ರಾಣ ಹೊತ್ತೊಯ್ದಿದ್ದಾನೆ. ರಾಯಚೂರು ಮಾರ್ಗವಾಗಿ ಹೊರಟಿದ್ದ ಈಚರ್ ವಾಹನ ವೇಗವಾಗಿ ಚಲಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆಬದಿಯ ಜಮೀನಿನತ್ತ ನುಗ್ಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಶವಗಳು ರಸ್ತೆ ಬದಿಯ ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಬೆಚ್ಚಿಬೀಳಿಸುವಂತಿತ್ತು.
ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Family of Three killed after a major accident on their way to attend the funeral in Raichur.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am