ಬ್ರೇಕಿಂಗ್ ನ್ಯೂಸ್
16-08-22 05:37 pm HK News Desk ಕರ್ನಾಟಕ
ರಾಯಚೂರು, ಆಗಸ್ಟ್ 16: ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಮಂಗಳವಾರ ಈಚರ್ ವಾಹನ ಮತ್ತು ಬೈಕ್ ನಡುಬೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸವರಾಜ್ ಮಾಸಳಿ(40), ಬಸವರಾಜ್ರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಮೃತ ದುರ್ದೈವಿಗಳು.
ಮೃತರೆಲ್ಲರೂ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳು. ಸಂಬಂಧಿಕರೊಬ್ಬರು ಮೃತಪಟ್ಟಿದ್ದು ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಈ ಮೂವರು ಒಂದೇ ಬೈಕ್ನಲ್ಲಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದರು. ಮಾರ್ಗಮಧ್ಯೆ ಈಚರ್ ಲಾರಿ ರೂಪದಲ್ಲಿ ಬಂದ ಜವರಾಯ ಮೂವರ ಪ್ರಾಣ ಹೊತ್ತೊಯ್ದಿದ್ದಾನೆ. ರಾಯಚೂರು ಮಾರ್ಗವಾಗಿ ಹೊರಟಿದ್ದ ಈಚರ್ ವಾಹನ ವೇಗವಾಗಿ ಚಲಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ವಾಹನ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆಬದಿಯ ಜಮೀನಿನತ್ತ ನುಗ್ಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದು, ಶವಗಳು ರಸ್ತೆ ಬದಿಯ ಜಮೀನಿನಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಬೆಚ್ಚಿಬೀಳಿಸುವಂತಿತ್ತು.
ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸಿರವಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Family of Three killed after a major accident on their way to attend the funeral in Raichur.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm