ಬ್ರೇಕಿಂಗ್ ನ್ಯೂಸ್
17-08-22 11:41 am HK News Desk ಕರ್ನಾಟಕ
ಕೋಲಾರ, ಆಗಸ್ಟ್ 17: ಚಾಲಕನ ನಿಯಂತ್ರಣದ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ದುರಂತ ಸಾವಿಗೀಡಾಗಿ, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ.
ಖಾಸಗಿ ಬಸ್ ಆಂಧ್ರ ಪ್ರದೇಶದ ಗುಂಟೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕ ಅತಿಯಾದ ವೇಗದಲ್ಲಿ ಬಸ್ ಚಲಾಯಿಸಿಕೊಂಡು ಬರುತ್ತಿದ್ದದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದೆ. ವೇಗದ ಚಾಲನೆ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್, ರಸ್ತೆಯನ್ನು ಬಿಟ್ಟು ಪಕ್ಕದ ಹಳ್ಳದ ಜಾಗದಲ್ಲಿ ಪಲ್ಟಿ ಹೊಡೆದಿದೆ.
ಬಸ್ನಲ್ಲಿ 30 ಜನರಿದ್ದರು. ಆಂಧ್ರ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಬಸ್ ಆಂಧ್ರದ ನಲ್ಲೂರಿನ ವೇಮೂರಿ-ಕಾವೇರಿ ಟ್ರಾವಲ್ಗೆ ಸೇರಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ಬೆನ್ನಲ್ಲೇ ಚಾಲಕ ಮತ್ತು ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಚಾಲಕ ಮತ್ತು ನಿರ್ವಾಹಕ ಪತ್ತೆಗೆ ಬಲೆ ಬೀಸಿದ್ದಾರೆ. ಪಲ್ಟಿಯಾಗಿದ್ದ ಬಸ್ ಅನ್ನು ತೆರುವುಗೊಳಿಸಲಾಗಿದೆ.
Andhra Bangalore Kaveri Bus topples due to over speed two dead on spot many injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm