ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm