ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm