ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm