ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm