ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm