ಬ್ರೇಕಿಂಗ್ ನ್ಯೂಸ್
17-08-22 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕ ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಸೇರಿದ ಮಠಗಳು, ದೇವಾಲಯಗಳು, ಟ್ರಸ್ಟ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಜರಾಯಿ ಇಲಾಖೆಯಿಂದ ಒಟ್ಟು 142.59 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ಅವುಗಳಲ್ಲಿ 178 ಮಠಗಳು, 59 ದೇವಸ್ಥಾನಗಳು, 26 ಸಂಘ-ಸಂಸ್ಥೆಗಳು ಸೇರಿವೆ. ಸಮಾಜಮುಖಿ ಚಟುವಟಿಕೆಗಳು, ಅಭಿವೃದ್ಧಿ, ಜೀರ್ಣೋದ್ಧಾರ ಕಾರ್ಯಗಳಿಗೆ ಈ ಹಣ ಬಳಸಿಕೊಳ್ಳಲು ಅವಕಾಶವಿದೆ. 178 ಮಠಗಳಿಗೆ 108.24 ಕೋಟಿ ರೂ., 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿ, 26 ಸಂಘ-ಸಂಸ್ಥೆಗಳು ಹಾಗೂ ಟ್ರಸ್ಟ್ಗಳಿಗೆ 13 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಆರ್ಥಿಕ ಇಲಾಖೆಯ ಸಹಮತದ ಮೇರೆಗೆ 148.59 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ಅನುದಾನ ಬಳಕೆಗೆ ಷರತ್ತು
ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಬಳಸಿಕೊಳ್ಳಲು ಇದೇ ಸಂದರ್ಭದಲ್ಲಿ ಷರತ್ತು ವಿಧಿಸಲಾಗಿದೆ. ಮಂಜೂರಾದ ಅನುದಾನವನ್ನು 'ಖಜಾನೆ-2' ಮೂಲಕ ಜಿಲ್ಲಾಧಿಕಾರಿಗಳ ಡಿಡಿಒಒ ಸಂಕೇತಕ್ಕೆ ಅಪ್ಲೋಡ್ ಮಾಡಬೇಕು. ಸಂಬಂಧಿಸಿದ ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಮೂಲಕ ನಿಯಮಾನುಸಾರ ಪ್ರಸ್ತಾವನೆ ಪಡೆದು, ಅನುದಾನ ಮಂಜೂರಾತಿಗೆ ಒಪ್ಪಿಗೆ ನೀಡಬೇಕು. ತಹಶೀಲ್ದಾರ್ ಅವರೇ ಅನುದಾನದ ಮೊತ್ತವನ್ನು ಡ್ರಾ ಮಾಡಿ ಸಂಸ್ಥೆಗಳಿಗೆ ಕೊಡಬೇಕು ಎಂಬ ನಿಯಮವನ್ನು ಹೇರಲಾಗಿದೆ.
ಅನುದಾನ ಪಡೆದುಕೊಂಡ ಸಂಸ್ಥೆಯು ನಿಯಮಾನುಸಾರ 'ಮುಂಗಡ ರಸೀದಿ' (Advance Receipt) ಪಡೆದು ಸಾದಿಲ್ವಾರು ಬಿಲ್ಗೆ ಲಗತ್ತಿಸಿ ಸಂಸ್ಥೆಯ ಹೆಸರಿಗೆ ಖಜಾನೆಯ ಚೆಕ್ ನೀಡಬೇಕು. ಉದ್ದೇಶಿತ ಕಾಮಗಾರಿಗಳ ಅಂದಾಜುಪಟ್ಟಿಗೆ ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದುಕೊಳ್ಳಬೇಕು ಎಂದು ಮುಜರಾಯಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ.
Karnataka government releases funds for temples and trusts before election.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm