ಬ್ರೇಕಿಂಗ್ ನ್ಯೂಸ್
            
                        17-08-22 10:58 pm Bangalore Correspondent ಕರ್ನಾಟಕ
            ಬೆಂಗಳೂರು, ಆಗಸ್ಟ್ 17: ವಿಶ್ವದ ಅತಿ ದೊಡ್ಡ ವಿಮಾನ ಏರ್ಬಸ್ ಎ-380 ಸೂಪರ್ಜಂಬೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರುವ ಅಕ್ಟೋಬರ್ 30ರಂದು ಲ್ಯಾಂಡ್ ಆಗಲಿದೆ.
ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅತಿ ದೊಡ್ಡ ಏರ್ ಬಸ್ ಭೂಸ್ವರ್ಶ ಮಾಡಲಿದೆ. ಒಟ್ಟು 72.75 ಮೀಟರ್ ಉದ್ದ, 24.45 ಮೀಟರ್ ಎತ್ತರ ಹೊಂದಿರುವ ಈ ವಿಮಾನದಲ್ಲಿ ಒಂದು ಬಾರಿ ಗರಿಷ್ಠ 853 ಮಂದಿ ಪ್ರಯಾಣಿಸಬಹುದಾಗಿದೆ. ಒಂದು ಬಾರಿಗೆ 3 ಸಾವಿರ ಸೂಟ್ಕೇಸ್ಗಳನ್ನು ತೆಗದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ.
ಈ ಕುರಿತು ಯುಎಇ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಹೇಳಿಕೆ ಬಿಡುಗಡೆ ಮಾಡಿದೆ. ಅಕ್ಟೋಬರ್ 30 ರಿಂದ ಪ್ರತಿನಿತ್ಯ ಬೆಂಗಳೂರಿನಿಂದ ದುಬೈಗೆ ಸೇವೆ ನೀಡಲಾಗುವುದು ಎಂದು ಅದು ತಿಳಿಸಿದೆ. ಎಮಿರೇಟ್ಸ್ ಸಂಸ್ಥೆಯ ಏರ್ಬಸ್ ಎ-380 ವಿಮಾನ ಲ್ಯಾಂಡ್ ಆಗುವ ಎರಡನೇ ನಿಲ್ದಾಣ ಬೆಂಗಳೂರು ಆಗಲಿದೆ. ಈ ಮೊದಲು 2014ರಲ್ಲಿ ಎಮಿರೇಟ್ಸ್ ಸಂಸ್ಥೆ ಮುಂಬೈನಿಂದ ದುಬೈಗೆ ಈ ಸೇವೆಯನ್ನು ನೀಡಿತ್ತು.
ದುಬೈನಿಂದ ಟೇಕ್ ಆಫ್ ಆದ ಏರ್ ಬಸ್ ಆಕ್ಟೋಬರ್ 30 ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ. ಈ ಡಬ್ಬಲ್ ಡೆಕ್ಕರ್ ವಿಮಾನದಲ್ಲಿ ಮೂರು ದರ್ಜೆಯಲ್ಲಿ ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ. ಎಕಾನಮಿ, ಬಿಸಿನೆಸ್, ಫಸ್ಟ್ ಕ್ಲಾಸ್ ಟಿಕೆಟ್ ಲಭ್ಯವಿದೆ.
ಬೋಯಿಂಗ್ 777 ಹೋಲಿಕೆ ಮಾಡಿದರೆ ಶೇ.45 ರಷ್ಟು ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ವಿಶ್ವದ 30 ವಿಮಾನ ನಿಲ್ದಾಣಗಳಿಗೆ ಏರ್ಬಸ್ 380 ವಿಮಾನ ಸೇವೆಯನ್ನು ಎಮಿರೇಟ್ಸ್ ನೀಡುತ್ತಿದೆ. 1985ರಿಂದ ಎಮಿರೇಟ್ಸ್ ಭಾರತದಲ್ಲಿ ಸೇವೆ ನೀಡಲು ಆರಂಭಿಸಿದೆ. 2003 ರಲ್ಲಿ ಏರ್ಬಸ್ ಕಂಪನಿ ಈ ವಿಮಾನವನ್ನು ನಿರ್ಮಾಣ ಮಾಡಿದೆ. ಇಲ್ಲಿಯವರೆಗೆ 3 ಪರೀಕ್ಷಾರ್ಥ ವಿಮಾನ ಸೇರಿದಂತೆ ಒಟ್ಟು 254 ವಿಮಾನಗಳನ್ನು ಉತ್ಪಾದನೆ ಮಾಡಲಾಗಿದೆ.
            
            
            Emirates airline on Tuesday announced to put the world’s largest commercial airplane A380 into service for flights between Dubai and Bengaluru from October 30. So far, the service between the two destinations was offered by the airline through Boeing 777.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm