ಬ್ರೇಕಿಂಗ್ ನ್ಯೂಸ್
18-08-22 12:40 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18 : ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿಯಾಗಿ ನೋಡಬೇಕು ಎನ್ನುವ ಮೂಲಕ ರಾಜ್ಯ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದ್ದ ಸಮಾಜ ಕಲ್ಯಾಣ ಮತ್ತು ಸಾರಿಗೆ ಸಚಿವ ಬಿ.ಶ್ರೀರಾಮುಲುಗೆ ರಾಜ್ಯ ಬಿಜೆಪಿ ವಿವರಣೆ ಕೇಳಿದೆ ಎನ್ನಲಾಗುತ್ತಿದೆ.
ಇದರ ನಡುವಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲನ್ನು ಭೇಟಿಯಾದ ಸಚಿವ ಶ್ರೀರಾಮುಲು ಸ್ಪಷ್ಟೀಕರಣ ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ತಮ್ಮ ಹೇಳಿಕೆಯ ಬಗ್ಗೆ ರಾಜ್ಯಾಧ್ಯಕ್ಷರಿಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಡಿಕೆಶಿ, ಅವರ ನಡುವಿನ ಜಗಳದ ವಿಚಾರದಲ್ಲಿ ಹಾಗೆ ಹೇಳಿದ್ದೇನೆ. ನಮ್ಮ ಪಕ್ಷಕ್ಕೆ ಬರಲಿ ಅಂತ ಹೇಳಿದ್ದಾಗಿ ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮುಲು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ ಸ್ಪಷ್ಟನೆ ಕೊಟ್ಟಿದ್ದೇನೆ. ಮೋದಿ ಬಂದಾಗ ವಿರೋಧ ಮಾಡಿದ್ದವರೂ ಬಿಜೆಪಿಗೆ ಬಂದಿದ್ದಾರೆ. ಹಿಂದುಳಿದ ಜಾತಿಗಳು ಒಂದಾಗಬೇಕು. ಹಿಂದುಳಿದ ಜಾತಿಗಳನ್ನು ಒಗ್ಗೂಡಿಸುವ ಕೆಲಸ ಪ್ರಧಾನಿ ಮಾಡುತ್ತಿದ್ದಾರೆ. ಇತ್ತೀಚಿನ ಬೆಳವಣಿಗೆ ನೋಡಿದ್ರೆ ಕಾಂಗ್ರೆಸ್ ನಲ್ಲಿ ಕಿರಿ ಕಿರಿ ಕಾಣುತ್ತಿದೆ. ಅದನ್ನು ನೋಡಿದರೆ ಮುಂದೊಂದು ದಿನ ಸಿದ್ದರಾಮಯ್ಯ ಬಿಜೆಪಿಗೆ ಬರ್ತಾರೆ ಅನ್ನುವ ಭಾವನೆಯಿಂದ ಮಾತನಾಡಿದ್ದೆ ಎಂದಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರಕ್ಕೆ ಹೋಗಲು ವಿಳಂಬವಾದ ಕಾರಣಕ್ಕೆ ಸಿದ್ದರಾಮಯ್ಯ ಅಲ್ಲಿ ಅಲ್ಪ ಮತದಲ್ಲಿ ಜಯ ಗಳಿಸಿದ್ದರು. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ನಾನು ಬಿಜೆಪಿಯ ಶಿಸ್ತಿನ ಸಿಪಾಯಿ. ಯಾರಿಗೋ ಹೆದರಿಕೊಂಡು ರಾಜಕೀಯ ಮಾಡುವ ಜಾಯಮಾನ ನನ್ನದಲ್ಲ ಎಂದು ಶ್ರೀರಾಮುಲು ಅವರು, ನೀವು ಕಾಂಗ್ರೆಸ್ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ. ಶ್ರೀರಾಮುಲು ಹಾಡಿ ಹೊಗಳಿದ್ದು ಬಿಜೆಪಿ ಒಳಗಡೆಯೇ ಇರಿಸು ಮುರಿಸು ಮಾಡಿತ್ತು.
The state BJP on Wednesday sought an explanation from Social Welfare and Transport Minister B Sriramulu, a day after he embarrassed the party by saying he wants to see Congress leader Siddaramaiah as chief minister again. BJP state president Nalin Kumar Kateel sought a report from Sriramulu for his speech in front of hundreds of people in Ballari on Tuesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm