ಬ್ರೇಕಿಂಗ್ ನ್ಯೂಸ್
05-10-20 01:52 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಆಸ್ತಿ - ಕಚೇರಿಗಳಿಗೆ ದಿಢೀರ್ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು 50 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.
ಡಿಕೆಶಿಗೆ ಸಂಬಂಧಪಟ್ಟ ಕಚೇರಿ, ಆಸ್ತಿಗಳು ಇರುವಂತಹ ಕರ್ನಾಟಕ, ದೆಹಲಿ ಮತ್ತು ಮುಂಬೈನಲ್ಲಿ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡಆಲಹಳ್ಳಿ, ಕನಕಪುರ ಮತ್ತು ಸದಾಶಿವನಗರ ಹೀಗೆ 9 ಕಡೆ ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಡಿ.ಕೆ.ಸುರೇಶ್, ಆಪ್ತ ಸಚಿನ್ ನಾರಾಯಣ್ ಸೇರಿದಂತೆ ಹಲವರ ಮನೆ, ಕಚೇರಿಗಳಿಗೆ ದಾಳಿಯಾಗಿದೆ. ಈ ವೇಳೆ, 50 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ, ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೇಂದ್ರದಲ್ಲಿ ಡಿಕೆಶಿ ಮತ್ತು ಆಪ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ಡಿಕೆಶಿ ಮತ್ತು ಆಪ್ತರ ವಿರುದ್ಧ ದಾಳಿ ನಡೆಸುವ ಬಗ್ಗೆ ರಾಜ್ಯ ಸರಕಾರದ ಅನುಮತಿ ಪಡೆದಿದ್ದರು. ದಾಳಿ ವೇಳೆ, ಭದ್ರತೆ ನೀಡುವಂತೆ ಕೇಳಿಕೊಂಡಿದ್ದರು. ಎಲ್ಲದಕ್ಕೂ ತಯಾರಿ ಮಾಡಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಬೆಳ್ಳಂಬೆಳಗ್ಗೆ 5.30ರ ವೇಳೆಗೆ ಡಿಕೆಶಿಯ ಬೆಂಗಳೂರಿನ ಮನೆ ಮೇಲೆ ದಾಳಿ ನಡೆಸಿದ್ದರು.
ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಒಂದು ವರ್ಷದ ಹಿಂದೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ್ದರು. 5 ಕೋಟಿಗೂ ಹೆಚ್ಚು ನಗದನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿತ್ತು. ಆನಂತರ ಡಿಕೆಶಿ ಪರ ವಕೀಲರು ಹೆಚ್ಚುವರಿ ದಾಳಿ ನಡೆಸದಂತೆ ಕೋರ್ಟಿನಿಂದ ಸ್ಟೇ ಪಡೆದಿದ್ದರು. ಆ ಬಳಿಕ ತಣ್ಣಗಾಗಿದ್ದ ಪ್ರಕರಣ ಇದೀಗ ದಿಢೀರ್ ಆಗಿ ಮತ್ತೆ ಮೇಲೆದ್ದುಕೊಂಡಿದೆ. ಹಳೇ ಪ್ರಕರಣ ಸಂಬಂಧಿಸಿಯೇ ಮತ್ತೆ ದಾಳಿ ನಡೆಸುತ್ತಿದ್ದಾರೆಯೇ ಅಥವಾ ಹೊಸ ಪ್ರಕರಣ ಏನಾದ್ರೂ ಇದೆಯೇ ಅನ್ನೋದು ತಿಳಿದುಬಂದಿಲ್ಲ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am