ಬ್ರೇಕಿಂಗ್ ನ್ಯೂಸ್
05-10-20 01:52 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಆಸ್ತಿ - ಕಚೇರಿಗಳಿಗೆ ದಿಢೀರ್ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು 50 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.
ಡಿಕೆಶಿಗೆ ಸಂಬಂಧಪಟ್ಟ ಕಚೇರಿ, ಆಸ್ತಿಗಳು ಇರುವಂತಹ ಕರ್ನಾಟಕ, ದೆಹಲಿ ಮತ್ತು ಮುಂಬೈನಲ್ಲಿ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡಆಲಹಳ್ಳಿ, ಕನಕಪುರ ಮತ್ತು ಸದಾಶಿವನಗರ ಹೀಗೆ 9 ಕಡೆ ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಡಿ.ಕೆ.ಸುರೇಶ್, ಆಪ್ತ ಸಚಿನ್ ನಾರಾಯಣ್ ಸೇರಿದಂತೆ ಹಲವರ ಮನೆ, ಕಚೇರಿಗಳಿಗೆ ದಾಳಿಯಾಗಿದೆ. ಈ ವೇಳೆ, 50 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ, ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೇಂದ್ರದಲ್ಲಿ ಡಿಕೆಶಿ ಮತ್ತು ಆಪ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ಡಿಕೆಶಿ ಮತ್ತು ಆಪ್ತರ ವಿರುದ್ಧ ದಾಳಿ ನಡೆಸುವ ಬಗ್ಗೆ ರಾಜ್ಯ ಸರಕಾರದ ಅನುಮತಿ ಪಡೆದಿದ್ದರು. ದಾಳಿ ವೇಳೆ, ಭದ್ರತೆ ನೀಡುವಂತೆ ಕೇಳಿಕೊಂಡಿದ್ದರು. ಎಲ್ಲದಕ್ಕೂ ತಯಾರಿ ಮಾಡಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಬೆಳ್ಳಂಬೆಳಗ್ಗೆ 5.30ರ ವೇಳೆಗೆ ಡಿಕೆಶಿಯ ಬೆಂಗಳೂರಿನ ಮನೆ ಮೇಲೆ ದಾಳಿ ನಡೆಸಿದ್ದರು.
ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಒಂದು ವರ್ಷದ ಹಿಂದೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ್ದರು. 5 ಕೋಟಿಗೂ ಹೆಚ್ಚು ನಗದನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿತ್ತು. ಆನಂತರ ಡಿಕೆಶಿ ಪರ ವಕೀಲರು ಹೆಚ್ಚುವರಿ ದಾಳಿ ನಡೆಸದಂತೆ ಕೋರ್ಟಿನಿಂದ ಸ್ಟೇ ಪಡೆದಿದ್ದರು. ಆ ಬಳಿಕ ತಣ್ಣಗಾಗಿದ್ದ ಪ್ರಕರಣ ಇದೀಗ ದಿಢೀರ್ ಆಗಿ ಮತ್ತೆ ಮೇಲೆದ್ದುಕೊಂಡಿದೆ. ಹಳೇ ಪ್ರಕರಣ ಸಂಬಂಧಿಸಿಯೇ ಮತ್ತೆ ದಾಳಿ ನಡೆಸುತ್ತಿದ್ದಾರೆಯೇ ಅಥವಾ ಹೊಸ ಪ್ರಕರಣ ಏನಾದ್ರೂ ಇದೆಯೇ ಅನ್ನೋದು ತಿಳಿದುಬಂದಿಲ್ಲ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm