ಬ್ರೇಕಿಂಗ್ ನ್ಯೂಸ್
05-10-20 01:52 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 05: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಆಸ್ತಿ - ಕಚೇರಿಗಳಿಗೆ ದಿಢೀರ್ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು 50 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ.
ಡಿಕೆಶಿಗೆ ಸಂಬಂಧಪಟ್ಟ ಕಚೇರಿ, ಆಸ್ತಿಗಳು ಇರುವಂತಹ ಕರ್ನಾಟಕ, ದೆಹಲಿ ಮತ್ತು ಮುಂಬೈನಲ್ಲಿ ಏಕಕಾಲದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ದೊಡ್ಡಆಲಹಳ್ಳಿ, ಕನಕಪುರ ಮತ್ತು ಸದಾಶಿವನಗರ ಹೀಗೆ 9 ಕಡೆ ದಾಳಿ ನಡೆಸಿದ್ದಾರೆ. ಡಿಕೆ ಶಿವಕುಮಾರ್, ಡಿ.ಕೆ.ಸುರೇಶ್, ಆಪ್ತ ಸಚಿನ್ ನಾರಾಯಣ್ ಸೇರಿದಂತೆ ಹಲವರ ಮನೆ, ಕಚೇರಿಗಳಿಗೆ ದಾಳಿಯಾಗಿದೆ. ಈ ವೇಳೆ, 50 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಇದೇ ವೇಳೆ, ಸಿಬಿಐ ಅಧಿಕಾರಿಗಳು ಬೆಂಗಳೂರಿನ ಕೇಂದ್ರದಲ್ಲಿ ಡಿಕೆಶಿ ಮತ್ತು ಆಪ್ತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ಡಿಕೆಶಿ ಮತ್ತು ಆಪ್ತರ ವಿರುದ್ಧ ದಾಳಿ ನಡೆಸುವ ಬಗ್ಗೆ ರಾಜ್ಯ ಸರಕಾರದ ಅನುಮತಿ ಪಡೆದಿದ್ದರು. ದಾಳಿ ವೇಳೆ, ಭದ್ರತೆ ನೀಡುವಂತೆ ಕೇಳಿಕೊಂಡಿದ್ದರು. ಎಲ್ಲದಕ್ಕೂ ತಯಾರಿ ಮಾಡಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಬೆಳ್ಳಂಬೆಳಗ್ಗೆ 5.30ರ ವೇಳೆಗೆ ಡಿಕೆಶಿಯ ಬೆಂಗಳೂರಿನ ಮನೆ ಮೇಲೆ ದಾಳಿ ನಡೆಸಿದ್ದರು.
ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಒಂದು ವರ್ಷದ ಹಿಂದೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ಮತ್ತು ದೆಹಲಿಯಲ್ಲಿ ದಾಳಿ ನಡೆಸಿದ್ದರು. 5 ಕೋಟಿಗೂ ಹೆಚ್ಚು ನಗದನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿತ್ತು. ಆನಂತರ ಡಿಕೆಶಿ ಪರ ವಕೀಲರು ಹೆಚ್ಚುವರಿ ದಾಳಿ ನಡೆಸದಂತೆ ಕೋರ್ಟಿನಿಂದ ಸ್ಟೇ ಪಡೆದಿದ್ದರು. ಆ ಬಳಿಕ ತಣ್ಣಗಾಗಿದ್ದ ಪ್ರಕರಣ ಇದೀಗ ದಿಢೀರ್ ಆಗಿ ಮತ್ತೆ ಮೇಲೆದ್ದುಕೊಂಡಿದೆ. ಹಳೇ ಪ್ರಕರಣ ಸಂಬಂಧಿಸಿಯೇ ಮತ್ತೆ ದಾಳಿ ನಡೆಸುತ್ತಿದ್ದಾರೆಯೇ ಅಥವಾ ಹೊಸ ಪ್ರಕರಣ ಏನಾದ್ರೂ ಇದೆಯೇ ಅನ್ನೋದು ತಿಳಿದುಬಂದಿಲ್ಲ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm