ಬ್ರೇಕಿಂಗ್ ನ್ಯೂಸ್
19-08-22 02:32 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 19: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ (20), ಸಚಿನ್ ವಿಕಾಸ ಕಾಳೆ (21), ವಿಕಾಸ ಲಕ್ಷ್ಮಣ ಢಾಣೆ (20) ಬಂಧಿತರು. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಇತರೆ ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ ಮಚ್ಚು, ಕುಡಗೋಲು, ಬಡಿಗೆ, ವೈರ್ ಪೈಪ್, ಮೊಬೈಲ್, ಖಾರದ ಪುಡಿ, ಮೂರು ಬೈಕ್ ಸೇರಿದಂತೆ 5.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಇಟ್ಟಂಗಿಹಾಳ ಕ್ರಾಸ್ ಹತ್ತಿರ ಆ.8 ರಂದು ಹಾಗೂ ಆ.12 ಹಂಚಿನಾಳ ತಾಂಡಾ ಹತ್ತಿರ ಮೂರು ಬೈಕಗಳ ಮೇಲೆ ಬಂದಿದ್ದ ಆರೇಳು ಜನರ ತಂಡ, ಮಾರಕಾಸ್ತ್ರಗಳಿಂದ ಬೆದರಿಸಿ, ಹಣ, ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ ಬಗ್ಗೆ ದೂರುಗಳು ದಾಖಲಾಗಿದ್ದವು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆನಂದಕುಮಾರ, ಡಿಎಸ್ಪಿ ಸಿದ್ದೇಶ್ವರ ಹಾಗೂ ಗ್ರಾಮೀಣ ವಲಯ ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಆರೋಪಿಗಳು ಮಧ್ಯರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡು ದೃಶ್ಯಗಳು ಸಿ.ಸಿ. ಕೆಮೆರಾದಲ್ಲಿ ಸೆರೆಯಾಗಿತ್ತು. ಶುಕ್ರವಾರ ಏಳು ಆರೋಪಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿರುವ ಎಸ್ಪಿ ಆನಂದಕುಮಾರ ನಗದು ಬಹುಮಾನ ಘೋಷಿಸಿದ್ದಾರೆ.
Seven of Dacoity gang from Maharashtra arrested by police in Vijayapura.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm