ಬ್ರೇಕಿಂಗ್ ನ್ಯೂಸ್
19-08-22 02:32 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 19: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ (20), ಸಚಿನ್ ವಿಕಾಸ ಕಾಳೆ (21), ವಿಕಾಸ ಲಕ್ಷ್ಮಣ ಢಾಣೆ (20) ಬಂಧಿತರು. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಇತರೆ ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ ಮಚ್ಚು, ಕುಡಗೋಲು, ಬಡಿಗೆ, ವೈರ್ ಪೈಪ್, ಮೊಬೈಲ್, ಖಾರದ ಪುಡಿ, ಮೂರು ಬೈಕ್ ಸೇರಿದಂತೆ 5.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಇಟ್ಟಂಗಿಹಾಳ ಕ್ರಾಸ್ ಹತ್ತಿರ ಆ.8 ರಂದು ಹಾಗೂ ಆ.12 ಹಂಚಿನಾಳ ತಾಂಡಾ ಹತ್ತಿರ ಮೂರು ಬೈಕಗಳ ಮೇಲೆ ಬಂದಿದ್ದ ಆರೇಳು ಜನರ ತಂಡ, ಮಾರಕಾಸ್ತ್ರಗಳಿಂದ ಬೆದರಿಸಿ, ಹಣ, ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ ಬಗ್ಗೆ ದೂರುಗಳು ದಾಖಲಾಗಿದ್ದವು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆನಂದಕುಮಾರ, ಡಿಎಸ್ಪಿ ಸಿದ್ದೇಶ್ವರ ಹಾಗೂ ಗ್ರಾಮೀಣ ವಲಯ ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಆರೋಪಿಗಳು ಮಧ್ಯರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡು ದೃಶ್ಯಗಳು ಸಿ.ಸಿ. ಕೆಮೆರಾದಲ್ಲಿ ಸೆರೆಯಾಗಿತ್ತು. ಶುಕ್ರವಾರ ಏಳು ಆರೋಪಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿರುವ ಎಸ್ಪಿ ಆನಂದಕುಮಾರ ನಗದು ಬಹುಮಾನ ಘೋಷಿಸಿದ್ದಾರೆ.
Seven of Dacoity gang from Maharashtra arrested by police in Vijayapura.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm