ಬ್ರೇಕಿಂಗ್ ನ್ಯೂಸ್
19-08-22 02:32 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 19: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ (20), ಸಚಿನ್ ವಿಕಾಸ ಕಾಳೆ (21), ವಿಕಾಸ ಲಕ್ಷ್ಮಣ ಢಾಣೆ (20) ಬಂಧಿತರು. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಇತರೆ ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ ಮಚ್ಚು, ಕುಡಗೋಲು, ಬಡಿಗೆ, ವೈರ್ ಪೈಪ್, ಮೊಬೈಲ್, ಖಾರದ ಪುಡಿ, ಮೂರು ಬೈಕ್ ಸೇರಿದಂತೆ 5.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಇಟ್ಟಂಗಿಹಾಳ ಕ್ರಾಸ್ ಹತ್ತಿರ ಆ.8 ರಂದು ಹಾಗೂ ಆ.12 ಹಂಚಿನಾಳ ತಾಂಡಾ ಹತ್ತಿರ ಮೂರು ಬೈಕಗಳ ಮೇಲೆ ಬಂದಿದ್ದ ಆರೇಳು ಜನರ ತಂಡ, ಮಾರಕಾಸ್ತ್ರಗಳಿಂದ ಬೆದರಿಸಿ, ಹಣ, ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ ಬಗ್ಗೆ ದೂರುಗಳು ದಾಖಲಾಗಿದ್ದವು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆನಂದಕುಮಾರ, ಡಿಎಸ್ಪಿ ಸಿದ್ದೇಶ್ವರ ಹಾಗೂ ಗ್ರಾಮೀಣ ವಲಯ ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಆರೋಪಿಗಳು ಮಧ್ಯರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡು ದೃಶ್ಯಗಳು ಸಿ.ಸಿ. ಕೆಮೆರಾದಲ್ಲಿ ಸೆರೆಯಾಗಿತ್ತು. ಶುಕ್ರವಾರ ಏಳು ಆರೋಪಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿರುವ ಎಸ್ಪಿ ಆನಂದಕುಮಾರ ನಗದು ಬಹುಮಾನ ಘೋಷಿಸಿದ್ದಾರೆ.
Seven of Dacoity gang from Maharashtra arrested by police in Vijayapura.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:13 pm
Udupi Correspondent
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
15-07-25 06:52 pm
Bangalore Correspondent
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am